Monday, March 2, 2026
Home Blog

ಸರಕಾರಿ ಕಚೇರಿಯಲ್ಲಿ ವಿಡಿಯೋ ಮಾಡುವುದು ಅಪರಾಧವೇ? ಇಲ್ಲಿದೆ ಸುಪ್ರೀಂ ಕೋರ್ಟ್ ಸ್ಪಷ್ಟನೆ!

0

​ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮಗಳನ್ನು ಪ್ರಶ್ನಿಸುವಾಗ, “ಸರಕಾರಿ ಕೆಲಸಕ್ಕೆ ಅಡ್ಡಿಪಡಿಸಿದರು” ಎಂಬ ಆರೋಪದಡಿ ಪ್ರಕರಣ ದಾಖಲಿಸುವ ಬೆದರಿಕೆಗಳನ್ನು ನಾವು ಆಗಾಗ ಕೇಳುತ್ತಿರುತ್ತೇವೆ. ಆದರೆ, ವಾಸ್ತವವಾಗಿ ಕಾನೂನು ಏನು ಹೇಳುತ್ತದೆ?

“ಕರ್ತವ್ಯಕ್ಕೆ ಅಡ್ಡಿ” ಕಾನೂನಿನ ವಾಸ್ತವ ಏನೆಂದರೆ ​ಹಿಂದಿನ ಭಾರತೀಯ ದಂಡ ಸಂಹಿತೆ (IPC)ಯ ಸೆಕ್ಷನ್ 353 ಹಾಗೂ ಪ್ರಸ್ತುತ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 132ರ ಅಡಿಯಲ್ಲಿ, ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಪ್ರಕರಣ ದಾಖಲಿಸಬಹುದು. ಆದರೆ, ಈ ಕೆಳಗಿನ ಕ್ರಿಯೆಗಳು “ಕರ್ತವ್ಯಕ್ಕೆ ಅಡ್ಡಿ” ಎನಿಸಿಕೊಳ್ಳುವುದಿಲ್ಲ.

ಬಿ.ಎನ್. ಜಾನ್ ವಿರುದ್ಧ ಉತ್ತರ ಪ್ರದೇಶ ಸರ್ಕಾರ (B.N. John v. State of U.P. – 2025) ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಸ್ಪಷ್ಟನೆ ನೀಡುತ್ತಾ, ಕೇವಲ ಮಾತಿನ ಚಕಮಕಿ, ಪ್ರಶ್ನಿಸುವುದು ಇಲ್ಲವೇ ಅಡ್ಡಿಪಡಿಸುವುದು (Obstruction) ಸೆಕ್ಷನ್ 353 ರ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ತಿಳಿಸಿದೆ. ಈ ಸೆಕ್ಷನ್ ಅನ್ವಯವಾಗಬೇಕಾದರೆ ‘ಭೌತಿಕ ಬಲದ ಪ್ರಯೋಗ’ (Physical Force) ಇಲ್ಲವೇ ‘ಹಲ್ಲೆ’ (Assault) ಕಡ್ಡಾಯವಾಗಿ ನಡೆದಿರಬೇಕು ಎಂದು ಆದೇಶಿಸಿ, ಪ್ರಕರಣವನ್ನು ರದ್ದುಗೊಳಿಸಿತು.

​ಕೇವಲ ಜೋರಾಗಿ ಪ್ರಶ್ನಿಸುವುದು. ​ಅಧಿಕಾರಿಯ ಕೆಲಸದ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವುದು. “ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ” ಎಂದು ಪ್ರಕರಣ ದಾಖಲಿಸಲು ಭೌತಿಕ ಬಲದ ಪ್ರಯೋಗ ನಡೆದಿರಬೇಕು. ​ಅಧಿಕಾರಿಯನ್ನು ತಳ್ಳುವುದು, ಎಳೆಯುವುದು, ​ಹಿಡಿದುಕೊಳ್ಳುವುದು ಹಾಗೂ ದೈಹಿಕವಾಗಿ ತಡೆಹಿಡಿಯುವುದು ನಡೆದಿರಬೇಕು. ​ಕೇವಲ ನಿಂತುಕೊಂಡು ವಿಡಿಯೋ ಮಾಡುವುದು ಯಾವುದೇ ಕಾರಣಕ್ಕೂ ಅಪರಾಧವಾಗುವುದಿಲ್ಲ ಎಂದಿದೆ.

ರಮೇಶ್ ಕರೋಶಿ ವಿರುದ್ಧ ಕರ್ನಾಟಕ ಸರ್ಕಾರ (2025) ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪೀಠ ಸರಕಾರಿ ಕಚೇರಿಯಲ್ಲಿ ಅಧಿಕಾರಿಯೊಬ್ಬರ ಬಳಿ ಸಾರ್ವಜನಿಕರೊಬ್ಬರು ಜೋರು ಧ್ವನಿಯಲ್ಲಿ ಮಾತನಾಡಿ, ದಾಖಲೆಗಳನ್ನು ಕೇಳಿದ್ದರು. ಇದರಿಂದ ಸಿಟ್ಟಾದ ಅಧಿಕಾರಿ ಆ ವ್ಯಕ್ತಿಯ ವಿರುದ್ಧ “ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ” ಎಂದು Section 353 IPC ರಡಿ ದೂರು ದಾಖಲಿಸಿದ್ದರು.

ಪ್ರಕರಣವನ್ನು ವಜಾಗೊಳಿಸಿ “ಕೇವಲ ಜೋರು ಧ್ವನಿಯಲ್ಲಿ ಮಾತನಾಡುವುದು, ಪ್ರಶ್ನಿಸುವುದು, ವಾಗ್ವಾದ ಮಾಡುವುದು ಅಪರಾಧವಲ್ಲ. ಅಧಿಕಾರಿಗಳ ಮೇಲೆ ದೈಹಿಕವಾಗಿ ಬಲಪ್ರಯೋಗ (Physical force) ಮಾಡದ ಹೊರತು ಸೆಕ್ಷನ್ 353ರ ಅಡಿ ಪ್ರಕರಣ ದಾಖಲಿಸುವುದು ಕಾನೂನುಬಾಹಿರ” ಎಂದು ತೀರ್ಪು ನೀಡಿತು.

​ಏಳು ವರ್ಷದೊಳಗಿನ ದಂಡನೆ ಇರುವ ಪ್ರಕರಣಗಳಲ್ಲಿ ಪೊಲೀಸರು ನೇರವಾಗಿ ಬಂಧಿಸುವಂತಿಲ್ಲ. ​ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (CrPC) ಸೆಕ್ಷನ್ 41A ಪ್ರಕಾರ, ಮೊದಲು ನೋಟಿಸ್ ನೀಡಿ ವಿಚಾರಣೆಗೆ ಕರೆಯಬೇಕು. ​ನೇರ ಬಂಧನವು ಕೇವಲ ಕೊನೆಯ ಆಯ್ಕೆಯಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ.

​ಅಧಿಕಾರಿಯನ್ನು ಪ್ರಶ್ನಿಸುವುದು ಸಾರ್ವಜನಿಕರ ಮೂಲಭೂತ ಹಕ್ಕು. ​ವಿಶೇಷ ಭದ್ರತಾ ನಿರ್ಬಂಧಗಳಿಲ್ಲದಿದ್ದರೆ, ಸಾರ್ವಜನಿಕ ಕಚೇರಿಯ ಕಾರ್ಯಗಳನ್ನು ವಿಡಿಯೋದಲ್ಲಿ ದಾಖಲಿಸುವುದು ಕಾನೂನುಬಾಹಿರವಲ್ಲ. ​ಭ್ರಷ್ಟಾಚಾರ ಕಂಡುಬಂದರೆ ಸಾಕ್ಷ್ಯ ಸಂಗ್ರಹಿಸುವುದು ನಾಗರಿಕ ಹಕ್ಕಿನ ಭಾಗವಾಗಿದೆ. ಆದರೆ ಅಧಿಕಾರಿಯ ಮೈಮೇಲೆ ಕೈಹಾಕುವುದು, ದೈಹಿಕವಾಗಿ ತಳ್ಳುವುದು, ಅಶ್ಲೀಲ, ಅವಹೇಳನಕಾರಿ ಪದಗಳನ್ನು ಬಳಸುವುದು ಹಾಗೂ ಉದ್ದೇಶಪೂರ್ವಕವಾಗಿ ಕೆಲಸವನ್ನು ತಡೆಯುವುದು ಸ್ಪಷ್ಟ ಅಪರಾಧವಾಗುತ್ತದೆ.

ಸರಕಾರಿ ಕಚೇರಿಯಲ್ಲಿ ಕ್ಯಾಮೆರಾ ಆನ್ ಮಾಡಿ ಪ್ರಶ್ನಿಸುವುದು ತಪ್ಪಲ್ಲ. ಆದರೆ ಅದು ಶಾಂತ, ಕಾನೂನುಬದ್ಧ ಮತ್ತು ಗೌರವ ರೀತಿಯಲ್ಲಿ ಇರಬೇಕು. ಅಧಿಕಾರಿಗಳು ಬೆದರಿಸಿ ಸುಳ್ಳು ಪ್ರಕರಣ ದಾಖಲಿಸಿದರೂ, ಕಾನೂನು ಮತ್ತು ನ್ಯಾಯಾಲಯ ಮಂದಿಯ ಪರವಾಗಿ ನಿಲ್ಲುತ್ತದೆ. ಸಾರ್ವಜನಿಕ ಕಚೇರಿಗಳು ಸಾರ್ವಜನಿಕರ ತೆರಿಗೆ ಹಣದಿಂದ ನಡೆಯುತ್ತವೆ. ಅಲ್ಲಿ ಭ್ರಷ್ಟಾಚಾರ, ಕರ್ತವ್ಯ ಲೋಪ ನಡೆಯುತ್ತಿದ್ದರೆ, ಅದನ್ನು ಸಾಕ್ಷ್ಯ ಸಮೇತ ಬಯಲಿಗೆಳೆಯಲು ವಿಡಿಯೋ ಮಾಡುವುದು ಸಾರ್ವಜನಿಕರ ಹಕ್ಕು ಎಂದು ಈ ಹಿಂದೆಯೂ ಮದ್ರಾಸ್ ಮತ್ತು ಬಾಂಬೆ ಹೈಕೋರ್ಟ್‌ಗಳು ಅನಿಸಿಕೆಪಟ್ಟಿವೆ.

ವೀರಭದ್ರೇಶ್ವರ ಸ್ವಾಮಿ ಹಾಗೂ ಜಗದ್ಗುರು ರೇಣುಕ ಭಗತ್ಪದರ ಜೋಡಿ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.

0

ವರದಿ: ಶಿವರಾಜ್ ಕನ್ನಡಿಗ
ಕೊಟ್ಟೂರು.
ಪಟ್ಟಣದ ಕೋಟೆ ಪ್ರದೇಶದ ಪೂರ್ವಿ ವೀರಭದ್ರೇಶ್ವರ ಸ್ವಾಮಿ ಹಾಗೂ ಜಗದ್ಗುರು ರೇಣುಕ ಭಗವತ್ಪಾದರ ಜೋಡಿ ರಥೋತ್ಸವವು ಭಾನುವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದೊಂದಿಗೆ ನೆರವೇರಿತು.

ಶ್ರೀ ವೀರಭದ್ರೇಶ್ವರ ಸ್ವಾಮಿಯ ಪಟವನ್ನ 1.90 ಲಕ್ಷ ರೂ.ಗೆ ಹಳ್ಳಿಗಂಗಮ್ಮ ಸ್ವೀಕರಿಸಿದರು.
ಪಟಾಕ್ಷಿ ಸವಾಲು ಮುಗಿಯುತ್ತಿದ್ದಂತೆ ಶ್ರೀ ಮನ್ ನಿರಂಜನ ಪ್ರಣವಸ್ವರೂಪಿ ಆರ್.ಎಂ ಶಿವಪ್ರಕಾಶ್ ಕೊಟ್ಟೂರು ದೇವರು ಮಹಲ್ ಇವರು ಜೋಡಿ ರಥೋತ್ಸವಕ್ಕೆ ಚಾಲನೆ ನೀಡಿದರು.
ರಥೋತ್ಸವಕ್ಕೆ ಚಾಲನೆ ದೊರೆಯುತ್ತಿದ್ದಂತೆ ನೆರದ ಭಕ್ತರೆಲ್ಲರು ಜಯ ಘೋಷ ಕೂಗಿ ಬಾಳೆ ಹಣ್ಣು,ಧವನ ಹಾಗೂ ಉತ್ತುತ್ತಿಗಳನ್ನ ಎಸೆದು ಭಕ್ತಿ ಸಮರ್ಪಿಸಿದರು.

ರಥೋತ್ಸವದ ಮಾರ್ಗದುದ್ದಕ್ಕು ಮಹಿಳೆಯರು ತಮ್ಮ ತಮ್ಮ ಮನೆ ಮುಂಭಾಗದಲ್ಲಿ ಆರತಿ ಬೆಳಗಿ ಹೂವು,ಹಣ್ಣು ಸಮರ್ಪಿಸಿದರು. ರಥೋತ್ಸವವು ಸಮಳ,ನಂದಿ ಧ್ವಜ ಕುಣಿತದ ಮೆರವಣಿಗೆಯೊಂದಿಗೆ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದೇವಸ್ಥಾನ ಮುಂಭಾಗದಿಂದ ಗಾಂಧಿ ಸರ್ಕಲ್ ಮೂಲಕ ಮುಖ್ಯ ರಸ್ತೆಯಲ್ಲಿ ಸಾಗಿ ದೇವಸ್ಥಾನ ತಲುಪಿತು.

ಈ ವೇಳೆ ದೈವಸ್ಥಾರಾದ ಆರ್.ಎಂ ಅಜ್ಯಯ್ಯ, ಕನ್ನಹಳ್ಳಿ ಮಂಜುನಾಥ, ಕೆ.ಶಿವಕುಮಾರ ಗೌಡ, ಆರ್. ಎಂ. ಗುರುಬಸವರಾಜ್, ಕನ್ನಹಳ್ಳಿ. ರಾಜಣ್ಣ ಗೌಡ, ಕನ್ನಹಳ್ಳಿ. ಸೋಮಶೇಖರ ಗೌಡ, ಗಡ್ಡಿ ವೀರಭದ್ರಪ್ಪ, ಗೌಡ್ರಸಿದ್ದಣ್ಣ, ಪಿ.ಎಂ ಈಶ್ವರಯ್ಯ, ಸಕ್ರಿಗೌಡ ಮಂಜುನಾಥ, ಕೋಡಹಳ್ಳಿ ಪ್ರಕಾಶ, ಕಡ್ಲಿ ಬಸವರಾಜ್, ಕೆ.ಎಸ್.ನಾಗರಾಜ್ ಗೌಡ, ಅಡಕಿ ಮಂಜುನಾಥ, ಟಿ.ಎಂ ಗಿರೀಶ, ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಮಡ್ರಳ್ಳಿ ಸಚೌಡಮ್ಮ ದೇವಿಯ ಜಾತ್ರೆಗೆಂದು ಮಡಿಲಕ್ಕಿ (ಪೂಜಾ ಸಾಮಾನು) ಖರೀದಿಸಲು ಮಡ್ರಳ್ಳಿ ಗ್ರಾಮಸ್ಥರಿಂದ ಕೊಟ್ಟೂರಿಗೆ ಪಾದಯಾತ್ರೆ.

0

ಕೊಟ್ಟೂರು :ಬಯಲು ನಾಡಿನ ಶಕ್ತಿ ದೇವತೆ ಎಂದೇ ಹೆಸರಾದ ಪಕ್ಕದ ಜಗಳೂರು ತಾಲೂಕಿನ ಮಡ್ರಳ್ಳಿ ಚೌಡಮ್ಮ ದೇವಿಯ ರಥೋತ್ಸವ ಮಾರ್ಚ್ 6ರಂದು ನಡೆಯಿಲಿರುವ ಹಿನ್ನಲೆಯಲ್ಲಿ ಮಡ್ರಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಸುಮಾರು 500 ಕ್ಕೂ ಹೆಚ್ಚು ಜನರು ಪಾದಯಾತ್ರೆ ಮೂಲಕ ಗುರುವಾರ ಫೆಬ್ರವರಿ 26ರಂದು ಕೊಟ್ಟೂರಿಗೆ ಆಗಮಿಸಿ ಜಾತ್ರೆಗೆ ಬೇಕಾದ ಧಾರ್ಮಿಕ ವಿಧಿ ವಿಧಾನ ಗಳೊಂದಿಗೆ ಸಾಮಾನುಗಳನ್ನು ಖರೀದಿಸಿದರು.

ಸುಮಾರು ವರ್ಷಗಳಿಂದ ಮಡ್ರಳ್ಳಿಯಿಂದ ಈ ಕಾರಣಕ್ಕಾಗಿ ಪಾದಯಾತ್ರೆ ಮೂಲಕ ಕೊಟ್ಟೂರಿಗೆ ಬಂದು ಪೂಜಾ ಬಳಕೆಯ ಸಾಮಾನುಗಳನ್ನು ಖರೀದಿಸುವುದನ್ನು ಪದ್ದತಿ ಮಾಡಿಕೊಂಡಿದ್ದು ಅದರಂತೆಯೇ ಈ ಪದ್ದತಿಯನ್ನು ಮುಂದುವರಿಸಿದರು. ಚೌಡಮ್ಮ ದೇವಿಗೆ ಕೊಟ್ಟೂರಿನಿಂದ ಖರೀದಿಸಿದ ಕುಂಕುಮ, ಬಳೆ, ಭಂಡಾರ ಸಾಮಾನುಗಳಿಂದಲೇ ಪೂಜೆ ಮಾಡುವ ಕಾರ್ಯವನ್ನು ನೆರವೇರಿಸಲಿದ್ದಾರೆ.

ಈ ದೇವಿಗೆ ಈ ಬಗೆಯ ಪೂಜಾ ಕಾರ್ಯದ ಮಡಿಲಕ್ಕಿಯನ್ನು ಮಾಡಿಕೊಂಡು ಕೊಟ್ಟೂರು ಜನರ ಪೂಜಾಗಳೊಂದಿಗೆ ಗುರುವಾರ ರಾತ್ರಿ 26ರ ನಂತರ ಪಾದಯಾತ್ರೆ ಮೂಲಕವೇ ಮಡ್ರಳ್ಳಿಗೆ ತೆರಳುವತ್ತ ಮುಂದಾದರು. ಶುಕ್ರವಾರ ಬೆಳಿಗ್ಗೆ 5-6 ರ ಸುಮಾರಿಗೆ ಪಾದಯಾತ್ರಿಗಳು ಮಡ್ರಳ್ಳಿಗೆ ಪ್ರವೇಶ ಪಡೆಯುತ್ತಿದ್ದಂತೆ ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ವಿವಿಧ ಬಗೆಯ ವಾದ್ಯಗಳೊಂದಿಗೆ ಮಡ್ರಳ್ಳಿಗೆ ಬರಮಾಡಿಕೊಂಡು ಚೌಡಮ್ಮ ದೇವಸ್ಥಾನಕ್ಕೆ ತೆಗೆದುಕೊಂಡು ಹೋದರು.

ಶ್ರೀಚೌಡಮ್ಮ ದೇವಸ್ಥಾನದ ಪೂಜಾ ಬಳಗದವರೊಂದಿಗೆ ಪುರುಷರು, ಮಹಿಳೆಯರು ಪಾದಯಾತ್ರೆ ಕೈಗೊಂಡು ಶ್ರೀದೇವಿಗೆ ತಮ್ಮ ಭಕ್ತಿ ಸಮರ್ಪಿಸಿದರು.

■ ಮಡ್ರಳ್ಳಿ ಚೌಡಮ್ಮ ದೇವಿಯ ರಥೋತ್ಸವ ಹುಣ್ಣಿಮೆಯ ನಂತರ ಅಂದರೇ ಮಾರ್ಚ್ 06ರಂದು ನಡೆಯಲಿದ್ದು ಈ ಕಾರಣಕ್ಕಾಗಿ ದೇವಿಗೆ ಮಡಿಲಕ್ಕಿಯ ಸಾಮಾನುಗಳನ್ನು ಖರೀದಿಸಲು ಕೊಟ್ಟೂರಿನ ಸಂತೆಗೆ ಬಂದಿದ್ದೇವೆ. ಕೊಟ್ಟೂರಿನಿಂದ ಪ್ರತಿವರ್ಷ ಈ ಬಗೆಯ ಸಾಮಾನುಗಳನ್ನು ಖರೀದಿಸಿಕೊಂಡು ದೇವಿಗೆ ಅರ್ಪಣೆ ಮಾಡುವುದು ಬಹು ವರ್ಷಗಳಿಂದ ನಡೆದುಕೊಂಡು ಬಂದಿದೆ. ಮಡ್ರಳ್ಳಿ ಮತ್ತು ಸುತ್ತಮುತ್ತಲಿನಿಂದ ನೂರಾರು ಸಂಖ್ಯೆಯ ಭಕ್ತರು ಪಾದಯಾತ್ರೆ ಮೂಲಕವೇ ಬಂದಿದ್ದು ಪುನಃ ಪಾದಯಾತ್ರೆ ಮೂಲಕವೇ ಮಡ್ರಳ್ಳಿಗೆ ತೆರಳುತ್ತೇವೆ.:
— ಚೌಡಪ್ಪ ಒಬಳೇಶ ಭಕ್ತರು
ಮಡ್ರಳ್ಳಿ ಗ್ರಾಮ.

ಕೊಟ್ಟೂರು: ಕೋಟೆಶ್ರೀ ವೀರಭದ್ರೇಶ್ವರ ರಥೋತ್ಸವ ನಿಮಿತ್ಯವಾಗಿ ವಿವಿಧ ಬಗೆಯ ಧಾರ್ಮಿಕ ಕಾರ್ಯಕ್ರಮ.

0

ವರದಿ: ಶಿವರಾಜ್ ಕನ್ನಡಿಗ
ಕೊಟ್ಟೂರು ಪಟ್ಟಣದ ಶ್ರೀ ಕೋಟೆ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ನಿಮಿತ್ಯವಾಗಿ, ಶನಿವಾರದಂದು ವಿವಿಧ ಬಗೆಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆ ಗಂಗೆಯನ್ನು ಪೂಜೆಗೈದು ದೇವಸ್ಥಾನಕ್ಕೆ ಭಕ್ತರು ಹೊತ್ತು ತರುತ್ತಿದ್ದಂತೆ ಅಗ್ನಿಕುಂಡ ಹಾಯುವ ಕಾರ್ಯಕ್ರಮ ಚಾಲನೆ ಪಡೆಯಿತು. ದೇವರಿಗೆ ಹರಕೆಹೊತ್ತು ವೀರಭದ್ರೇಶ್ವರ ಸ್ವಾಮಿಯ ಭಕ್ತರು ಸಾಲಾಗಿ ಅಗ್ನಿ ಹಾದು ಭಕ್ತಿ ಸಮರ್ಪಿಸಿದರು.

ಈ ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳು ಸಹ ಉತ್ಸಾಹದಿಂದ ಪಾಲ್ಗೊಂಡು ನಮಿಸಿದರು. ಅಗ್ನಿ ಹಾಯುವ ಕಾರ್ಯಕ್ರಮದ ನಂತರ ವೀರಭದ್ರ ಸ್ವಾಮಿಯ ಹಲಗೆ ಮತ್ತು ಗುಗ್ಗಳದ ಮೆರವಣಿಗೆ ಪಟ್ಟಣದ ಕೊಟ್ಟೂರೇಶ್ವರ ದೇವಸ್ಥಾನದ ರಸ್ತೆ ಸೇರಿದಂತೆ ಇತರೆಡೆ ಸಾಗಿತು.

ಈ ಸಂದರ್ಭದಲ್ಲಿ ವೀರಭದ್ರ ದೇವರನ್ನು ಮನೆದೇವರನ್ನಾಗಿಸಿಕೊಂಡ ಯುವಕರು ಮತ್ತು ಮಹಿಳೆಯರು ಚೂಪಾದ ದೊಡ್ಡ ಶಸ್ತ್ರ (ತಾಮ್ರದ ಸೂಜಿ)ಯನ್ನು ಯುವಕರು ಕಪಾಳಕ್ಕೆ ಚುಚ್ಚಿಸಿಕೊಂಡರೆ
ಮಹಿಳೆಯರು ತಮ್ಮ ಕೈ ಮೇಲ್ಬಾಗದಲ್ಲಿ ಚುಚ್ಚಿಸಿಕೊಂಡು ಭಕ್ತಿ ಸಮರ್ಪಿಸಿದರು. ಕೆಲ ಯುವಕರು ಗಂಟು ಗಂಟಾದ ದಾರವನ್ನು ಸೂಜಿಯೊಂದಿಗೆ ಚುಚ್ಚಿಸಿಕೊಂಡು ಸಾಮೂಹಿಕವಾಗಿ ನೃತ್ಯ ಮಾಡುತ್ತಾ ಸಾಗಿದ್ದು ನೋಡುಗರನ್ನು ರೋಮಾಂಚನಗೊಳಿಸಿತು ಮನಗೆದ್ದಿತು.

ಡಿಸಿಆರ್‌ಇ ಠಾಣೆಗಳಿಗೆ ಡಿವೈಎಸ್ಪಿ ನೇಮಕಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್ಎಸ್ಸಿ-ಎಸ್ಟಿ ದೌರ್ಜನ್ಯ ಪ್ರಕರಣಗಳ ತನಿಖೆಗೆ ವೇಗ ನೀಡಲು ಮಹತ್ವದ ನಿರ್ಧಾರ

0

ಬೆಂಗಳೂರು: ರಾಜ್ಯದ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ವ್ಯಾಪ್ತಿಯ ನೂತನ ಪೊಲೀಸ್ ಠಾಣೆಗಳಲ್ಲಿ ಡಿವೈಎಸ್ಪಿ ಹುದ್ದೆಗಳು ಖಾಲಿ ಇರುವುದರಿಂದ ಎಸ್ಸಿ ಹಾಗೂ ಎಸ್ಟಿ ಸಮುದಾಯಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆಯಲ್ಲಿ ವಿಳಂಬ ಉಂಟಾಗುತ್ತಿದೆ ಎಂಬ ವಿಷಯ ಇತ್ತೀಚೆಗೆ ಬೆಳಕಿಗೆ ಬಂದಿತ್ತು. “ಡಿಸಿಆರ್‌ಇ ಠಾಣೆಗೆ ಆಗ್ತಿಲ್ಲ ಡಿವೈಎಸ್ಪಿ ನೇಮಕ, ಎಸ್ಸಿ-ಎಸ್ಟಿ ದೌರ್ಜನ್ಯ ಕೇಸ್‌ಗಳ ತನಿಖೆಗೆ ಎಫೆಕ್ಟ್” ಎಂಬ ಶೀರ್ಷಿಕೆಯಡಿ ಪ್ರಕಟವಾದ ವರದಿ ಸರ್ಕಾರದ ಗಮನ ಸೆಳೆದಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ತಕ್ಷಣವೇ ಅಗತ್ಯ ಡಿವೈಎಸ್ಪಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಮನವಿ ಮಾಡಿದ್ದಾರೆ. ಡಿಸಿಆರ್‌ಇ ಪೊಲೀಸ್ ಠಾಣೆಗಳಲ್ಲಿ ಡಿವೈಎಸ್ಪಿ ಅಧಿಕಾರಿಗಳ ಕೊರತೆಯಿಂದಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳ ತನಿಖೆ ನಿರ್ದಿಷ್ಟ ಅವಧಿಯಲ್ಲಿ ಪೂರ್ಣಗೊಳ್ಳುವುದಿಲ್ಲ ಎಂಬ ಅಂಶವನ್ನು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೋಹನ್ ಕುಮಾರ್ ದಾನಪ್ಪ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಕ್ರಮ ಕೈಗೊಂಡಿದೆ. ಡಿಸಿಆರ್‌ಇ ಘಟಕದಲ್ಲಿನ ಇನ್ಸ್‌ಪೆಕ್ಟರ್ ಹುದ್ದೆಯನ್ನು ಡಿವೈಎಸ್ಪಿ ಹುದ್ದೆಗೆ ಮೇಲ್ದರ್ಜೆಗೇರಿಸುವಂತೆ ಹಾಗೂ ಅಗತ್ಯ ಸಂಖ್ಯೆಯಲ್ಲಿ ಡಿವೈಎಸ್ಪಿಗಳನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ. ಜೊತೆಗೆ, ಡಿಸಿಆರ್‌ಇ ಘಟಕದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಶೇಷ ಭತ್ಯೆ ಮಂಜೂರು ಮಾಡುವ ಪ್ರಸ್ತಾವನೆಯನ್ನು 2026-27ನೇ ಸಾಲಿನ ಆಯವ್ಯಯದಲ್ಲಿ ಸೇರಿಸಲು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ.

ಡಿಸಿಆರ್‌ಇ ಠಾಣೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆಗೆ ವಿಶೇಷವಾಗಿ ಸ್ಥಾಪಿತವಾಗಿವೆ. ಇಂತಹ ಪ್ರಕರಣಗಳಲ್ಲಿ ವೇಗವಾಗಿ ಮತ್ತು ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳುವುದು ಅತ್ಯಂತ ಅಗತ್ಯ. ಆದರೆ ಅಧಿಕಾರಿಗಳ ಕೊರತೆಯಿಂದಾಗಿ ಪ್ರಕರಣಗಳ ಪರಿಶೀಲನೆ, ಸಾಕ್ಷ್ಯ ಸಂಗ್ರಹ ಹಾಗೂ ಚಾರ್ಜ್‌ಶೀಟ್ ಸಲ್ಲಿಕೆಯಲ್ಲಿ ವಿಳಂಬವಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಸರ್ಕಾರದ ಇತ್ತೀಚಿನ ನಿರ್ದೇಶನದಿಂದ ಡಿಸಿಆರ್‌ಇ ಠಾಣೆಗಳ ಕಾರ್ಯಕ್ಷಮತೆ ಹೆಚ್ಚಳವಾಗುವ ನಿರೀಕ್ಷೆ ವ್ಯಕ್ತವಾಗಿದೆ. ಅಗತ್ಯ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿದರೆ ತನಿಖಾ ಪ್ರಕ್ರಿಯೆ ವೇಗಗೊಳ್ಳುವುದರ ಜೊತೆಗೆ, ಪೀಡಿತರಿಗೆ ನ್ಯಾಯ ದೊರಕುವಲ್ಲಿ ಸಹಾಯವಾಗಲಿದೆ ಎಂದು ಕಾನೂನು ವಲಯದವರು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಾರೆ, ಡಿಸಿಆರ್‌ಇ ಠಾಣೆಗಳ ಬಲವರ್ಧನೆ ಮೂಲಕ ಎಸ್ಸಿ-ಎಸ್ಟಿ ದೌರ್ಜನ್ಯ ಪ್ರಕರಣಗಳ ತನಿಖೆಗೆ ಹೊಸ ಚೈತನ್ಯ ಸಿಗುವ ನಿರೀಕ್ಷೆಯಿದ್ದು, ನಾಗರಿಕ ಹಕ್ಕುಗಳ ರಕ್ಷಣೆಯಲ್ಲಿ ಸರ್ಕಾರದ ಬದ್ಧತೆಯನ್ನು ಈ ಕ್ರಮ ಪ್ರತಿಬಿಂಬಿಸುತ್ತದೆ.

ಬೀದಿ ನಾಯಿಗಳ ಹಾವಳಿಗೆ ಬೇಸತ್ತ ಕೊಟ್ಟೂರು ಪಟ್ಟಣದ ಜನ..!!

0

ವರದಿ ಶಿವರಾಜ್ ಕನ್ನಡಿಗ
ಕೊಟ್ಟೂರು : ಪಟ್ಟಣದ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ನಾಗರಿಕರು ಜೀವ ಭಯದಲ್ಲಿ ರಸ್ತೆಗೆ ಇಳಿಯುವಂತಾಗಿದೆ. ಪಾಲಿಕೆಯ ಪ್ರತಿ ಸಭೆಯಲ್ಲೂ ನಾಯಿಗಳ ದಾಳಿ ಪ್ರಸ್ತಾಪವಾದರೂ ಪರಿಹಾರ ಮಾತ್ರ ಮರೀಚಿಕೆಯಾಗಿದೆ.

ಕೊಟ್ಟೂರು ಪಟ್ಟಣದ ವಿವಿಧ ಕಡೆ…!! , ರಸ್ತೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ನಾಯಿಗಳ ಹಾವಳಿ . ರಸ್ತೆ ಬದಿಯಲ್ಲಿ ಆಡುವ ಮಕ್ಕಳಿಗೆ, ಮನೆ– ಮನೆಗೆ ಪೇಪರ್ ಹಾಕುವವರಿಗೆ, ಬೈಕ್‌ ಸವಾರರಿಗೆ, ಶಾಲೆಯಿಂದ ಮನೆಗೆ ಹೊರಟ ಮಕ್ಕಳಿಗೆ ನಾಯಿಗಳ ಹಿಂಡು ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಪ್ರಸಂಗಗಳು ಸಾಕಷ್ಟಿವೆ.

ಪ್ರತಿ ವರ್ಷ ಬೀದಿ ನಾಯಿ ಕಡಿತದಿಂದ ನೂರಾರು ಪ್ರಕರಣಗಳು ದಾಖಲಾಗುತ್ತಿವೆ. ಇದನ್ನು ನಿಯಂತ್ರಣಕ್ಕೆ ತಂದು ಪರಿಹಾರ ಕೊಡಬೇಕಾದ ಪಟ್ರಮಸಿ ಮುಖಗಳು ಅಧಿಕಾರಿಗಳು ಜಾಣ ಮೌನವಹಿಸಿದ್ದಾರೆ. ಹಾದಿ ಬೀದಿಯಲ್ಲಿ ನಾಯಿಗಳ ಕಡಿತಕ್ಕೆ ತುತ್ತಾದ ಮಕ್ಕಳು, ವೃದ್ಧರು ಯಾತನೆ ಅನುಭವಿಸುತ್ತಿದ್ದಾರೆ.

“ಪರಿಸರ ಮಾಲಿನ್ಯ ನಿಯಂತ್ರಣ,ಕಸದಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳುವಳಿಕೆ :-ಎ.ನಸರುಲ್ಲಾ”

0

ವರದಿ:ಶಿವರಾಜ್ ಕನ್ನಡಿಗ

ಕೊಟ್ಟೂರು : ತಾಲೂಕಿನ ತಿಮ್ಮಲಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕರು ತಮ್ಮ ಶಾಲೆ ಮಕ್ಕಳೊಂದಿಗೆ ಕೊಟ್ಟೂರು ಪಟ್ಟಣದ ಘನ ತ್ಯಾಜ್ಯ ವಸ್ತು ನಿರ್ವಹಣಾ ಘಟಕದ ನಿರ್ವಹಣೆಯ ಕುರಿತು ವೀಕ್ಷಣೆ ಮಾಡುವ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಿದ್ದರು, ಸದರಿ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಭಾಗವಹಿಸಿದ್ದರು.

ಸದರಿ ಕಾರ್ಯಕ್ರಮದ ಕುರಿತು ಮುಖ್ಯಾಧಿಕಾರಿಗಳಾದ ಎ.ನಸರುಲ್ಲಾ ಮಾತನಾಡಿ ಕೊಟ್ಟೂರು ಪಟ್ಟಣದ ವ್ಯಾಪ್ತಿಯಲ್ಲಿ ಶೇಖರಣೆಯಾಗುವ ಕಸವನ್ನು ಎಸ್.ಡಬ್ಲ್ಯೂ.ಎಂ ಘಟಕದಲ್ಲಿ ಹಸಿ ಕಸ, ಒಣಕಸ, ಹಾಕಿಕಾರಕ ಕಸವವನ್ನು ವಿಂಗಡಣೆ ಮಾಡಲಾಗುತ್ತಿದ್ದು, ಹಸಿ ಕಸದಿಂದ ಎರೆಹುಳು ಗೊಬ್ಬರವನ್ನು ತಯಾರಿಸಲಾಗುತ್ತಿರುತ್ತದೆ, ಮನೆ ಮನೆ ಗಳಲ್ಲಿ ಶೇಖರಣೆಯಾಗುವ ಕಸವನ್ನು ಮೂಲದಲ್ಲಿಯೇ ವಿಂಗಡಣೆ ಮಾಡಿ ತ್ಯಾಜ್ಯ ವಿಲೇವಾರಿ ವಾಹನಗಳಿಗೆ ನೀಡಲು ತಿಳಿಸಿದರು ಹಾಗೂ ಸರ್ಕಾರಿ ಆದೇಶಗಳು, ಎನ್.ಜಿ.ಟಿ ನಿಯಮಾವಳಿಗಳು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರ ಆದೇಶದ ಬಗ್ಗೆ ಮತ್ತು ಕಸದಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸಿ ತಾವುಗಳು ಸಹ ತಮ್ಮ ಮನೆಗಳಲ್ಲಿ, ಗ್ರಾಮ , ಪಟ್ಟಣಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ತಿಳಿಸಿದರು, ಕಸ ವಿಲೇವಾರಿ ಘಟಕ ವೀಕ್ಷಿಸಿ ಮಾಹಿತಿ ಪಡೆದು ಶಾಲೆ ವಿದ್ಯಾರ್ಥಿಗಳು, ಶಿಕ್ಷಕರು ಮುಖ್ಯಾಧಿಕಾರಿಗಳಿಗೆ, ಪಟ್ಟಣ ಪಂಚಾಯಿತಿ ಪೌರಕಾರ್ಮಿಕರಿಗೆ ಧನ್ಯವಾದ ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್.ಕೆ.ಗೀತಾ, ಕಿರಿಯ ಆರೋಗ್ಯ ನೀಕ್ಷಕರು, ಪರುಸಪ್ಪ, ಹೇಮನಗೌಡ, ಮೈಲಾರಿ, ಸಿಬ್ಬಂದಿ ವರ್ಗ ಹಾಗೂ ಶಾಲೆ ಮುಖ್ಯಗುರುಗಳಾದ ಬಿ ಸಣ್ಣಲಿಂಗನಗೌಡ, ಸಹ ಶಿಕ್ಷಕರಾದ ಎ.ಮಹೇಂದ್ರ, ಸಂತೋಷ , ಸವಿತ, ಕವಿತ ಮತ್ತು ಸುಮ ಉಪಸ್ಥಿತರಿದ್ದರು

ತಾರನಗರದಲ್ಲಿ ಒಳಾಂಗಣ ಕೀಟನಾಶಕ ಸಿಂಪರಣೆ ಕುರಿತು ಪೂರ್ವಬಾವಿ ಸಭೆ

0

ಸಂಡೂರು ತಾಲೂಕು ತಾರನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣದ ಭಾಗವಾಗಿ ಒಳಾಂಗಣ ಕೀಟನಾಶಕ ಸಿಂಪರಣೆ (IRS) ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ವಬಾವಿ ಸಭೆ ಜರುಗಿತು. ಮಾನ್ಯ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಹಾಗೂ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು ಡಾ. ಮರಿಯಂಬಿ, ತಾಲೂಕು ಆರೋಗ್ಯಾಧಿಕಾರಿ ಡಾ. ಭರತ್ ಕುಮಾರ್ ಮತ್ತು ಆಡಳಿತ ವೈದ್ಯಾಧಿಕಾರಿ ಡಾ. ಸುನೀತಾ ಅವರ ನೇತೃತ್ವದಲ್ಲಿ ಸಭೆ ಆಯೋಜಿಸಲಾಯಿತು.

ಈ ಸಭೆಯಲ್ಲಿ ತೋರಣಗಲ್ಲು ವಿಲೇಜ್, ತೋರಣಗಲ್ಲು ಆರ್‌ಎಸ್ ಮತ್ತು ವಡ್ಡು ಉಪಕೇಂದ್ರ ವ್ಯಾಪ್ತಿಯ PHCO, HIO, CHO ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಭಾಗವಹಿಸಿದರು. ಜಿಲ್ಲೆಯಿಂದ ಆಗಮಿಸಿದ್ದ ಡಾ. ಮರಿಯಂಬಿ ಅವರು ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣದ ಮಹತ್ವ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಶ್ರೀಮತಿ ನಂದಿನಿ ಕಡಿ ಅವರು ಒಳಾಂಗಣ ಕೀಟನಾಶಕ ಸಿಂಪರಣೆ (IRS) ಮಾಡುವ ವಿಧಾನ, ಸುರಕ್ಷತಾ ಕ್ರಮಗಳು ಮತ್ತು ಕಾರ್ಯನಿರ್ವಹಣೆಯ ಸಮಯದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ಸಿಬ್ಬಂದಿಗೆ ಮಾರ್ಗದರ್ಶನ ನೀಡಿದರು.

ಜಿಲ್ಲಾ VBD ಸಲಹೆಗಾರ ಪ್ರತಾಪ್ ಅವರು ಮನೆಮನೆಗೆ ಭೇಟಿ ನೀಡುವ ಸಂದರ್ಭದಲ್ಲಿನ ಮುಂಜಾಗ್ರತಾ ಕ್ರಮಗಳು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ IEC ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸುವ ಕುರಿತು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಸಿಬ್ಬಂದಿಯ ಸಹಕಾರ ಅಗತ್ಯವೆಂದು ಅಧಿಕಾರಿಗಳು ಕರೆ ನೀಡಿದರು. ಸಭೆಯ ಮೂಲಕ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಕ್ಕಾಗಿ ಕ್ಷೇತ್ರಮಟ್ಟದಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಲು ನಿರ್ಧರಿಸಲಾಯಿತು.

ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಕಲ್ಯಾಣ: ಪಿಡಿಓ ನಶ್ರದ್ ಬಾನು

0

ಬಳ್ಳಾರಿ,ಫೆ.05:ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಕಲ್ಯಾಣವಾಗುತ್ತಿದೆ ಎಂದು ಶಿಡಗಿನಮೊಳ ಗ್ರಾಮಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಶ್ರದ್ ಬಾನು ಅವರು ಹೇಳಿದರು.

ಬಳ್ಳಾರಿ ತಾಲ್ಲೂಕಿನ ಮೀನಳ್ಳಿ ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕ್ಷೇತ್ರ ಪ್ರಚಾರ ಕಾರ್ಯಕ್ರಮದಡಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಕುರಿತು ಜಾನಪದ ಸಂಗೀತ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಹಲವಾರು ಅಭಿವೃದ್ಧಿ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.
ಸಾರ್ವಜನಿಕರು ಅವುಗಳ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಅಕ್ಷಯ ಕಲಾ ಟ್ರಸ್ಟ್ ಹೊಸ ಯರಗುಡಿ ತಂಡವು ರಾಜ್ಯ ಸರ್ಕಾರದ ಯೋಜನೆಗಳನ್ನು ಜಾನಪದ ಸಂಗೀತ ಕಾರ್ಯಕ್ರಮದ ಮೂಲಕ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಶಿಡಗಿನಮೊಳ ಗ್ರಾಪಂ ಅಧ್ಯಕ್ಷರಾದ ಸುಜಾತ ತಾಯಣ್ಣ, ಉಪಾಧ್ಯಕ್ಷ ಮಹಾನಂದಿ ತಿಮ್ಮಯ್ಯ, ಅಂಗನವಾಡಿ ಕಾರ್ಯಕರ್ತೆ ವರಲಕ್ಷಿö್ಮ, ಅಕ್ಷಯ ಕಲಾ ಟ್ರಸ್ಟ್ ನ ಅಧ್ಯಕ್ಷ ಹಾಗೂ ಕಲಾವಿದ ಹೆಚ್.ಜಿ.ಸುಂಕಪ್ಪ, ಕಲಾವಿದರಾದ ಸರ್ವಮಂಗಳಮ್ಮ, ಪಾರ್ವತಿ, ದೇವೇಂದ್ರಪ್ಪ, ತಮಟೆ ವಾದಕರಾಗಿ ಸೋಮಶೇಖರ್, ನಾಗಮೂರ್ತಿ ಸೇರಿದಂತೆ ಗ್ರಾಮದ ಸಾರ್ವಜನಿಕರು ಇದ್ದರು.

ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ನಿರ್ಧಾರ ಶಿಷ್ಟಾಚಾರದನ್ವಯ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ

0

ಬಳ್ಳಾರಿ,ಫೆ.05:ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಶಿಷ್ಟಾಚಾರದನ್ವಯ ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುವುದು.

ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು, ಸಮುದಾಯದ ಮುಖಂಡರೊAದಿಗೆ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತದಿಂದ ಫೆ.15 ರಂದು ಸಂತ ಸೇವಾಲಾಲ್ ಜಯಂತಿ, ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ ಮತ್ತು ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಲು ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಬ್ಯಾನರ್ ಅಳವಡಿಕೆಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಸೂಚನೆಗಳಿದ್ದು, ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯಲೇ ಬೇಕು. ಡಿಜೆ ಧ್ವನಿವರ್ಧಕ ಬಳಕೆ, ಬೈಕ್ ರ‍್ಯಾಲಿಗೆ ಅವಕಾಶವಿಲ್ಲ. ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭಕ್ತಿ-ಭಾವದಿಂದ ಮಹನೀಯರ ಜಯಂತಿ ಆಚರಿಸೋಣ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.

ಶಿಷ್ಟಾಚಾರದAತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ, ಸಂಘ-ಸAಸ್ಥೆಗಳಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಮಹನೀಯರ ಆಚಾರ-ವಿಚಾರಗಳನ್ನು ಪರಿಣಿತರಿಂದ ವಿಶೇಷ ಉಪನ್ಯಾಸ ಮೂಲಕ ತಲುಪಿಸಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು ಎಂದರು.
ಜಯAತಿ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ನಡೆಯಲಿದ್ದು, ಯಾವುದೇ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು ಎಂದರು.

ವೇದಿಕೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಕಾರ್ಯವನ್ನು ನಿರ್ವಹಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದರು. ಇದೇ ವೇಳೆ ಸಮಾಜದ ಮುಖಂಡರು ಜಯಂತಿ ಕಾರ್ಯಕ್ರಮ ಯಶಸ್ವಿಗೆ ತಮ್ಮ ಸಲಹೆ-ಸೂಚನೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಾನಗರ ಪಾಲಿಕೆ, ಪೊಲೀಸ್ ಅಧಿಕಾರಿಗಳು, ಡಿಡಿಪಿಐ, ಅಧಿಕಾರಿಗಳು ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.