ಕೊಟ್ಟೂರು :ಬಯಲು ನಾಡಿನ ಶಕ್ತಿ ದೇವತೆ ಎಂದೇ ಹೆಸರಾದ ಪಕ್ಕದ ಜಗಳೂರು ತಾಲೂಕಿನ ಮಡ್ರಳ್ಳಿ ಚೌಡಮ್ಮ ದೇವಿಯ ರಥೋತ್ಸವ ಮಾರ್ಚ್ 6ರಂದು ನಡೆಯಿಲಿರುವ ಹಿನ್ನಲೆಯಲ್ಲಿ ಮಡ್ರಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಸುಮಾರು 500 ಕ್ಕೂ ಹೆಚ್ಚು ಜನರು ಪಾದಯಾತ್ರೆ ಮೂಲಕ ಗುರುವಾರ ಫೆಬ್ರವರಿ 26ರಂದು ಕೊಟ್ಟೂರಿಗೆ ಆಗಮಿಸಿ ಜಾತ್ರೆಗೆ ಬೇಕಾದ ಧಾರ್ಮಿಕ ವಿಧಿ ವಿಧಾನ ಗಳೊಂದಿಗೆ ಸಾಮಾನುಗಳನ್ನು ಖರೀದಿಸಿದರು.
ಸುಮಾರು ವರ್ಷಗಳಿಂದ ಮಡ್ರಳ್ಳಿಯಿಂದ ಈ ಕಾರಣಕ್ಕಾಗಿ ಪಾದಯಾತ್ರೆ ಮೂಲಕ ಕೊಟ್ಟೂರಿಗೆ ಬಂದು ಪೂಜಾ ಬಳಕೆಯ ಸಾಮಾನುಗಳನ್ನು ಖರೀದಿಸುವುದನ್ನು ಪದ್ದತಿ ಮಾಡಿಕೊಂಡಿದ್ದು ಅದರಂತೆಯೇ ಈ ಪದ್ದತಿಯನ್ನು ಮುಂದುವರಿಸಿದರು. ಚೌಡಮ್ಮ ದೇವಿಗೆ ಕೊಟ್ಟೂರಿನಿಂದ ಖರೀದಿಸಿದ ಕುಂಕುಮ, ಬಳೆ, ಭಂಡಾರ ಸಾಮಾನುಗಳಿಂದಲೇ ಪೂಜೆ ಮಾಡುವ ಕಾರ್ಯವನ್ನು ನೆರವೇರಿಸಲಿದ್ದಾರೆ.
ಈ ದೇವಿಗೆ ಈ ಬಗೆಯ ಪೂಜಾ ಕಾರ್ಯದ ಮಡಿಲಕ್ಕಿಯನ್ನು ಮಾಡಿಕೊಂಡು ಕೊಟ್ಟೂರು ಜನರ ಪೂಜಾಗಳೊಂದಿಗೆ ಗುರುವಾರ ರಾತ್ರಿ 26ರ ನಂತರ ಪಾದಯಾತ್ರೆ ಮೂಲಕವೇ ಮಡ್ರಳ್ಳಿಗೆ ತೆರಳುವತ್ತ ಮುಂದಾದರು. ಶುಕ್ರವಾರ ಬೆಳಿಗ್ಗೆ 5-6 ರ ಸುಮಾರಿಗೆ ಪಾದಯಾತ್ರಿಗಳು ಮಡ್ರಳ್ಳಿಗೆ ಪ್ರವೇಶ ಪಡೆಯುತ್ತಿದ್ದಂತೆ ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ವಿವಿಧ ಬಗೆಯ ವಾದ್ಯಗಳೊಂದಿಗೆ ಮಡ್ರಳ್ಳಿಗೆ ಬರಮಾಡಿಕೊಂಡು ಚೌಡಮ್ಮ ದೇವಸ್ಥಾನಕ್ಕೆ ತೆಗೆದುಕೊಂಡು ಹೋದರು.
ಶ್ರೀಚೌಡಮ್ಮ ದೇವಸ್ಥಾನದ ಪೂಜಾ ಬಳಗದವರೊಂದಿಗೆ ಪುರುಷರು, ಮಹಿಳೆಯರು ಪಾದಯಾತ್ರೆ ಕೈಗೊಂಡು ಶ್ರೀದೇವಿಗೆ ತಮ್ಮ ಭಕ್ತಿ ಸಮರ್ಪಿಸಿದರು.
■ ಮಡ್ರಳ್ಳಿ ಚೌಡಮ್ಮ ದೇವಿಯ ರಥೋತ್ಸವ ಹುಣ್ಣಿಮೆಯ ನಂತರ ಅಂದರೇ ಮಾರ್ಚ್ 06ರಂದು ನಡೆಯಲಿದ್ದು ಈ ಕಾರಣಕ್ಕಾಗಿ ದೇವಿಗೆ ಮಡಿಲಕ್ಕಿಯ ಸಾಮಾನುಗಳನ್ನು ಖರೀದಿಸಲು ಕೊಟ್ಟೂರಿನ ಸಂತೆಗೆ ಬಂದಿದ್ದೇವೆ. ಕೊಟ್ಟೂರಿನಿಂದ ಪ್ರತಿವರ್ಷ ಈ ಬಗೆಯ ಸಾಮಾನುಗಳನ್ನು ಖರೀದಿಸಿಕೊಂಡು ದೇವಿಗೆ ಅರ್ಪಣೆ ಮಾಡುವುದು ಬಹು ವರ್ಷಗಳಿಂದ ನಡೆದುಕೊಂಡು ಬಂದಿದೆ. ಮಡ್ರಳ್ಳಿ ಮತ್ತು ಸುತ್ತಮುತ್ತಲಿನಿಂದ ನೂರಾರು ಸಂಖ್ಯೆಯ ಭಕ್ತರು ಪಾದಯಾತ್ರೆ ಮೂಲಕವೇ ಬಂದಿದ್ದು ಪುನಃ ಪಾದಯಾತ್ರೆ ಮೂಲಕವೇ ಮಡ್ರಳ್ಳಿಗೆ ತೆರಳುತ್ತೇವೆ.: — ಚೌಡಪ್ಪ ಒಬಳೇಶ ಭಕ್ತರು ಮಡ್ರಳ್ಳಿ ಗ್ರಾಮ.
ವರದಿ: ಶಿವರಾಜ್ ಕನ್ನಡಿಗ ಕೊಟ್ಟೂರು ಪಟ್ಟಣದ ಶ್ರೀ ಕೋಟೆ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ನಿಮಿತ್ಯವಾಗಿ, ಶನಿವಾರದಂದು ವಿವಿಧ ಬಗೆಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆ ಗಂಗೆಯನ್ನು ಪೂಜೆಗೈದು ದೇವಸ್ಥಾನಕ್ಕೆ ಭಕ್ತರು ಹೊತ್ತು ತರುತ್ತಿದ್ದಂತೆ ಅಗ್ನಿಕುಂಡ ಹಾಯುವ ಕಾರ್ಯಕ್ರಮ ಚಾಲನೆ ಪಡೆಯಿತು. ದೇವರಿಗೆ ಹರಕೆಹೊತ್ತು ವೀರಭದ್ರೇಶ್ವರ ಸ್ವಾಮಿಯ ಭಕ್ತರು ಸಾಲಾಗಿ ಅಗ್ನಿ ಹಾದು ಭಕ್ತಿ ಸಮರ್ಪಿಸಿದರು.
ಈ ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳು ಸಹ ಉತ್ಸಾಹದಿಂದ ಪಾಲ್ಗೊಂಡು ನಮಿಸಿದರು. ಅಗ್ನಿ ಹಾಯುವ ಕಾರ್ಯಕ್ರಮದ ನಂತರ ವೀರಭದ್ರ ಸ್ವಾಮಿಯ ಹಲಗೆ ಮತ್ತು ಗುಗ್ಗಳದ ಮೆರವಣಿಗೆ ಪಟ್ಟಣದ ಕೊಟ್ಟೂರೇಶ್ವರ ದೇವಸ್ಥಾನದ ರಸ್ತೆ ಸೇರಿದಂತೆ ಇತರೆಡೆ ಸಾಗಿತು.
ಈ ಸಂದರ್ಭದಲ್ಲಿ ವೀರಭದ್ರ ದೇವರನ್ನು ಮನೆದೇವರನ್ನಾಗಿಸಿಕೊಂಡ ಯುವಕರು ಮತ್ತು ಮಹಿಳೆಯರು ಚೂಪಾದ ದೊಡ್ಡ ಶಸ್ತ್ರ (ತಾಮ್ರದ ಸೂಜಿ)ಯನ್ನು ಯುವಕರು ಕಪಾಳಕ್ಕೆ ಚುಚ್ಚಿಸಿಕೊಂಡರೆ ಮಹಿಳೆಯರು ತಮ್ಮ ಕೈ ಮೇಲ್ಬಾಗದಲ್ಲಿ ಚುಚ್ಚಿಸಿಕೊಂಡು ಭಕ್ತಿ ಸಮರ್ಪಿಸಿದರು. ಕೆಲ ಯುವಕರು ಗಂಟು ಗಂಟಾದ ದಾರವನ್ನು ಸೂಜಿಯೊಂದಿಗೆ ಚುಚ್ಚಿಸಿಕೊಂಡು ಸಾಮೂಹಿಕವಾಗಿ ನೃತ್ಯ ಮಾಡುತ್ತಾ ಸಾಗಿದ್ದು ನೋಡುಗರನ್ನು ರೋಮಾಂಚನಗೊಳಿಸಿತು ಮನಗೆದ್ದಿತು.
ಬೆಂಗಳೂರು: ರಾಜ್ಯದ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್ಇ) ವ್ಯಾಪ್ತಿಯ ನೂತನ ಪೊಲೀಸ್ ಠಾಣೆಗಳಲ್ಲಿ ಡಿವೈಎಸ್ಪಿ ಹುದ್ದೆಗಳು ಖಾಲಿ ಇರುವುದರಿಂದ ಎಸ್ಸಿ ಹಾಗೂ ಎಸ್ಟಿ ಸಮುದಾಯಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆಯಲ್ಲಿ ವಿಳಂಬ ಉಂಟಾಗುತ್ತಿದೆ ಎಂಬ ವಿಷಯ ಇತ್ತೀಚೆಗೆ ಬೆಳಕಿಗೆ ಬಂದಿತ್ತು. “ಡಿಸಿಆರ್ಇ ಠಾಣೆಗೆ ಆಗ್ತಿಲ್ಲ ಡಿವೈಎಸ್ಪಿ ನೇಮಕ, ಎಸ್ಸಿ-ಎಸ್ಟಿ ದೌರ್ಜನ್ಯ ಕೇಸ್ಗಳ ತನಿಖೆಗೆ ಎಫೆಕ್ಟ್” ಎಂಬ ಶೀರ್ಷಿಕೆಯಡಿ ಪ್ರಕಟವಾದ ವರದಿ ಸರ್ಕಾರದ ಗಮನ ಸೆಳೆದಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ತಕ್ಷಣವೇ ಅಗತ್ಯ ಡಿವೈಎಸ್ಪಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಮನವಿ ಮಾಡಿದ್ದಾರೆ. ಡಿಸಿಆರ್ಇ ಪೊಲೀಸ್ ಠಾಣೆಗಳಲ್ಲಿ ಡಿವೈಎಸ್ಪಿ ಅಧಿಕಾರಿಗಳ ಕೊರತೆಯಿಂದಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳ ತನಿಖೆ ನಿರ್ದಿಷ್ಟ ಅವಧಿಯಲ್ಲಿ ಪೂರ್ಣಗೊಳ್ಳುವುದಿಲ್ಲ ಎಂಬ ಅಂಶವನ್ನು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮೋಹನ್ ಕುಮಾರ್ ದಾನಪ್ಪ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಕ್ರಮ ಕೈಗೊಂಡಿದೆ. ಡಿಸಿಆರ್ಇ ಘಟಕದಲ್ಲಿನ ಇನ್ಸ್ಪೆಕ್ಟರ್ ಹುದ್ದೆಯನ್ನು ಡಿವೈಎಸ್ಪಿ ಹುದ್ದೆಗೆ ಮೇಲ್ದರ್ಜೆಗೇರಿಸುವಂತೆ ಹಾಗೂ ಅಗತ್ಯ ಸಂಖ್ಯೆಯಲ್ಲಿ ಡಿವೈಎಸ್ಪಿಗಳನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ. ಜೊತೆಗೆ, ಡಿಸಿಆರ್ಇ ಘಟಕದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಶೇಷ ಭತ್ಯೆ ಮಂಜೂರು ಮಾಡುವ ಪ್ರಸ್ತಾವನೆಯನ್ನು 2026-27ನೇ ಸಾಲಿನ ಆಯವ್ಯಯದಲ್ಲಿ ಸೇರಿಸಲು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ.
ಡಿಸಿಆರ್ಇ ಠಾಣೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆಗೆ ವಿಶೇಷವಾಗಿ ಸ್ಥಾಪಿತವಾಗಿವೆ. ಇಂತಹ ಪ್ರಕರಣಗಳಲ್ಲಿ ವೇಗವಾಗಿ ಮತ್ತು ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳುವುದು ಅತ್ಯಂತ ಅಗತ್ಯ. ಆದರೆ ಅಧಿಕಾರಿಗಳ ಕೊರತೆಯಿಂದಾಗಿ ಪ್ರಕರಣಗಳ ಪರಿಶೀಲನೆ, ಸಾಕ್ಷ್ಯ ಸಂಗ್ರಹ ಹಾಗೂ ಚಾರ್ಜ್ಶೀಟ್ ಸಲ್ಲಿಕೆಯಲ್ಲಿ ವಿಳಂಬವಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಸರ್ಕಾರದ ಇತ್ತೀಚಿನ ನಿರ್ದೇಶನದಿಂದ ಡಿಸಿಆರ್ಇ ಠಾಣೆಗಳ ಕಾರ್ಯಕ್ಷಮತೆ ಹೆಚ್ಚಳವಾಗುವ ನಿರೀಕ್ಷೆ ವ್ಯಕ್ತವಾಗಿದೆ. ಅಗತ್ಯ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿದರೆ ತನಿಖಾ ಪ್ರಕ್ರಿಯೆ ವೇಗಗೊಳ್ಳುವುದರ ಜೊತೆಗೆ, ಪೀಡಿತರಿಗೆ ನ್ಯಾಯ ದೊರಕುವಲ್ಲಿ ಸಹಾಯವಾಗಲಿದೆ ಎಂದು ಕಾನೂನು ವಲಯದವರು ಅಭಿಪ್ರಾಯಪಟ್ಟಿದ್ದಾರೆ.
ಒಟ್ಟಾರೆ, ಡಿಸಿಆರ್ಇ ಠಾಣೆಗಳ ಬಲವರ್ಧನೆ ಮೂಲಕ ಎಸ್ಸಿ-ಎಸ್ಟಿ ದೌರ್ಜನ್ಯ ಪ್ರಕರಣಗಳ ತನಿಖೆಗೆ ಹೊಸ ಚೈತನ್ಯ ಸಿಗುವ ನಿರೀಕ್ಷೆಯಿದ್ದು, ನಾಗರಿಕ ಹಕ್ಕುಗಳ ರಕ್ಷಣೆಯಲ್ಲಿ ಸರ್ಕಾರದ ಬದ್ಧತೆಯನ್ನು ಈ ಕ್ರಮ ಪ್ರತಿಬಿಂಬಿಸುತ್ತದೆ.
ವರದಿ ಶಿವರಾಜ್ ಕನ್ನಡಿಗ ಕೊಟ್ಟೂರು : ಪಟ್ಟಣದ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ನಾಗರಿಕರು ಜೀವ ಭಯದಲ್ಲಿ ರಸ್ತೆಗೆ ಇಳಿಯುವಂತಾಗಿದೆ. ಪಾಲಿಕೆಯ ಪ್ರತಿ ಸಭೆಯಲ್ಲೂ ನಾಯಿಗಳ ದಾಳಿ ಪ್ರಸ್ತಾಪವಾದರೂ ಪರಿಹಾರ ಮಾತ್ರ ಮರೀಚಿಕೆಯಾಗಿದೆ.
ಕೊಟ್ಟೂರು ಪಟ್ಟಣದ ವಿವಿಧ ಕಡೆ…!! , ರಸ್ತೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ನಾಯಿಗಳ ಹಾವಳಿ . ರಸ್ತೆ ಬದಿಯಲ್ಲಿ ಆಡುವ ಮಕ್ಕಳಿಗೆ, ಮನೆ– ಮನೆಗೆ ಪೇಪರ್ ಹಾಕುವವರಿಗೆ, ಬೈಕ್ ಸವಾರರಿಗೆ, ಶಾಲೆಯಿಂದ ಮನೆಗೆ ಹೊರಟ ಮಕ್ಕಳಿಗೆ ನಾಯಿಗಳ ಹಿಂಡು ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಪ್ರಸಂಗಗಳು ಸಾಕಷ್ಟಿವೆ.
ಪ್ರತಿ ವರ್ಷ ಬೀದಿ ನಾಯಿ ಕಡಿತದಿಂದ ನೂರಾರು ಪ್ರಕರಣಗಳು ದಾಖಲಾಗುತ್ತಿವೆ. ಇದನ್ನು ನಿಯಂತ್ರಣಕ್ಕೆ ತಂದು ಪರಿಹಾರ ಕೊಡಬೇಕಾದ ಪಟ್ರಮಸಿ ಮುಖಗಳು ಅಧಿಕಾರಿಗಳು ಜಾಣ ಮೌನವಹಿಸಿದ್ದಾರೆ. ಹಾದಿ ಬೀದಿಯಲ್ಲಿ ನಾಯಿಗಳ ಕಡಿತಕ್ಕೆ ತುತ್ತಾದ ಮಕ್ಕಳು, ವೃದ್ಧರು ಯಾತನೆ ಅನುಭವಿಸುತ್ತಿದ್ದಾರೆ.
ಕೊಟ್ಟೂರು : ತಾಲೂಕಿನ ತಿಮ್ಮಲಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕರು ತಮ್ಮ ಶಾಲೆ ಮಕ್ಕಳೊಂದಿಗೆ ಕೊಟ್ಟೂರು ಪಟ್ಟಣದ ಘನ ತ್ಯಾಜ್ಯ ವಸ್ತು ನಿರ್ವಹಣಾ ಘಟಕದ ನಿರ್ವಹಣೆಯ ಕುರಿತು ವೀಕ್ಷಣೆ ಮಾಡುವ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಿದ್ದರು, ಸದರಿ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಭಾಗವಹಿಸಿದ್ದರು.
ಸದರಿ ಕಾರ್ಯಕ್ರಮದ ಕುರಿತು ಮುಖ್ಯಾಧಿಕಾರಿಗಳಾದ ಎ.ನಸರುಲ್ಲಾ ಮಾತನಾಡಿ ಕೊಟ್ಟೂರು ಪಟ್ಟಣದ ವ್ಯಾಪ್ತಿಯಲ್ಲಿ ಶೇಖರಣೆಯಾಗುವ ಕಸವನ್ನು ಎಸ್.ಡಬ್ಲ್ಯೂ.ಎಂ ಘಟಕದಲ್ಲಿ ಹಸಿ ಕಸ, ಒಣಕಸ, ಹಾಕಿಕಾರಕ ಕಸವವನ್ನು ವಿಂಗಡಣೆ ಮಾಡಲಾಗುತ್ತಿದ್ದು, ಹಸಿ ಕಸದಿಂದ ಎರೆಹುಳು ಗೊಬ್ಬರವನ್ನು ತಯಾರಿಸಲಾಗುತ್ತಿರುತ್ತದೆ, ಮನೆ ಮನೆ ಗಳಲ್ಲಿ ಶೇಖರಣೆಯಾಗುವ ಕಸವನ್ನು ಮೂಲದಲ್ಲಿಯೇ ವಿಂಗಡಣೆ ಮಾಡಿ ತ್ಯಾಜ್ಯ ವಿಲೇವಾರಿ ವಾಹನಗಳಿಗೆ ನೀಡಲು ತಿಳಿಸಿದರು ಹಾಗೂ ಸರ್ಕಾರಿ ಆದೇಶಗಳು, ಎನ್.ಜಿ.ಟಿ ನಿಯಮಾವಳಿಗಳು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರ ಆದೇಶದ ಬಗ್ಗೆ ಮತ್ತು ಕಸದಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸಿ ತಾವುಗಳು ಸಹ ತಮ್ಮ ಮನೆಗಳಲ್ಲಿ, ಗ್ರಾಮ , ಪಟ್ಟಣಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ತಿಳಿಸಿದರು, ಕಸ ವಿಲೇವಾರಿ ಘಟಕ ವೀಕ್ಷಿಸಿ ಮಾಹಿತಿ ಪಡೆದು ಶಾಲೆ ವಿದ್ಯಾರ್ಥಿಗಳು, ಶಿಕ್ಷಕರು ಮುಖ್ಯಾಧಿಕಾರಿಗಳಿಗೆ, ಪಟ್ಟಣ ಪಂಚಾಯಿತಿ ಪೌರಕಾರ್ಮಿಕರಿಗೆ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್.ಕೆ.ಗೀತಾ, ಕಿರಿಯ ಆರೋಗ್ಯ ನೀಕ್ಷಕರು, ಪರುಸಪ್ಪ, ಹೇಮನಗೌಡ, ಮೈಲಾರಿ, ಸಿಬ್ಬಂದಿ ವರ್ಗ ಹಾಗೂ ಶಾಲೆ ಮುಖ್ಯಗುರುಗಳಾದ ಬಿ ಸಣ್ಣಲಿಂಗನಗೌಡ, ಸಹ ಶಿಕ್ಷಕರಾದ ಎ.ಮಹೇಂದ್ರ, ಸಂತೋಷ , ಸವಿತ, ಕವಿತ ಮತ್ತು ಸುಮ ಉಪಸ್ಥಿತರಿದ್ದರು
ಸಂಡೂರು ತಾಲೂಕು ತಾರನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣದ ಭಾಗವಾಗಿ ಒಳಾಂಗಣ ಕೀಟನಾಶಕ ಸಿಂಪರಣೆ (IRS) ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ವಬಾವಿ ಸಭೆ ಜರುಗಿತು. ಮಾನ್ಯ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಹಾಗೂ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು ಡಾ. ಮರಿಯಂಬಿ, ತಾಲೂಕು ಆರೋಗ್ಯಾಧಿಕಾರಿ ಡಾ. ಭರತ್ ಕುಮಾರ್ ಮತ್ತು ಆಡಳಿತ ವೈದ್ಯಾಧಿಕಾರಿ ಡಾ. ಸುನೀತಾ ಅವರ ನೇತೃತ್ವದಲ್ಲಿ ಸಭೆ ಆಯೋಜಿಸಲಾಯಿತು.
ಈ ಸಭೆಯಲ್ಲಿ ತೋರಣಗಲ್ಲು ವಿಲೇಜ್, ತೋರಣಗಲ್ಲು ಆರ್ಎಸ್ ಮತ್ತು ವಡ್ಡು ಉಪಕೇಂದ್ರ ವ್ಯಾಪ್ತಿಯ PHCO, HIO, CHO ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಭಾಗವಹಿಸಿದರು. ಜಿಲ್ಲೆಯಿಂದ ಆಗಮಿಸಿದ್ದ ಡಾ. ಮರಿಯಂಬಿ ಅವರು ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣದ ಮಹತ್ವ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಶ್ರೀಮತಿ ನಂದಿನಿ ಕಡಿ ಅವರು ಒಳಾಂಗಣ ಕೀಟನಾಶಕ ಸಿಂಪರಣೆ (IRS) ಮಾಡುವ ವಿಧಾನ, ಸುರಕ್ಷತಾ ಕ್ರಮಗಳು ಮತ್ತು ಕಾರ್ಯನಿರ್ವಹಣೆಯ ಸಮಯದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ಸಿಬ್ಬಂದಿಗೆ ಮಾರ್ಗದರ್ಶನ ನೀಡಿದರು.
ಜಿಲ್ಲಾ VBD ಸಲಹೆಗಾರ ಪ್ರತಾಪ್ ಅವರು ಮನೆಮನೆಗೆ ಭೇಟಿ ನೀಡುವ ಸಂದರ್ಭದಲ್ಲಿನ ಮುಂಜಾಗ್ರತಾ ಕ್ರಮಗಳು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ IEC ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸುವ ಕುರಿತು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಸಿಬ್ಬಂದಿಯ ಸಹಕಾರ ಅಗತ್ಯವೆಂದು ಅಧಿಕಾರಿಗಳು ಕರೆ ನೀಡಿದರು. ಸಭೆಯ ಮೂಲಕ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಕ್ಕಾಗಿ ಕ್ಷೇತ್ರಮಟ್ಟದಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಲು ನಿರ್ಧರಿಸಲಾಯಿತು.
ಬಳ್ಳಾರಿ,ಫೆ.05:ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಕಲ್ಯಾಣವಾಗುತ್ತಿದೆ ಎಂದು ಶಿಡಗಿನಮೊಳ ಗ್ರಾಮಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಶ್ರದ್ ಬಾನು ಅವರು ಹೇಳಿದರು.
ಬಳ್ಳಾರಿ ತಾಲ್ಲೂಕಿನ ಮೀನಳ್ಳಿ ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕ್ಷೇತ್ರ ಪ್ರಚಾರ ಕಾರ್ಯಕ್ರಮದಡಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಕುರಿತು ಜಾನಪದ ಸಂಗೀತ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಹಲವಾರು ಅಭಿವೃದ್ಧಿ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರು ಅವುಗಳ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಅಕ್ಷಯ ಕಲಾ ಟ್ರಸ್ಟ್ ಹೊಸ ಯರಗುಡಿ ತಂಡವು ರಾಜ್ಯ ಸರ್ಕಾರದ ಯೋಜನೆಗಳನ್ನು ಜಾನಪದ ಸಂಗೀತ ಕಾರ್ಯಕ್ರಮದ ಮೂಲಕ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಶಿಡಗಿನಮೊಳ ಗ್ರಾಪಂ ಅಧ್ಯಕ್ಷರಾದ ಸುಜಾತ ತಾಯಣ್ಣ, ಉಪಾಧ್ಯಕ್ಷ ಮಹಾನಂದಿ ತಿಮ್ಮಯ್ಯ, ಅಂಗನವಾಡಿ ಕಾರ್ಯಕರ್ತೆ ವರಲಕ್ಷಿö್ಮ, ಅಕ್ಷಯ ಕಲಾ ಟ್ರಸ್ಟ್ ನ ಅಧ್ಯಕ್ಷ ಹಾಗೂ ಕಲಾವಿದ ಹೆಚ್.ಜಿ.ಸುಂಕಪ್ಪ, ಕಲಾವಿದರಾದ ಸರ್ವಮಂಗಳಮ್ಮ, ಪಾರ್ವತಿ, ದೇವೇಂದ್ರಪ್ಪ, ತಮಟೆ ವಾದಕರಾಗಿ ಸೋಮಶೇಖರ್, ನಾಗಮೂರ್ತಿ ಸೇರಿದಂತೆ ಗ್ರಾಮದ ಸಾರ್ವಜನಿಕರು ಇದ್ದರು.
ಬಳ್ಳಾರಿ,ಫೆ.05:ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಶಿಷ್ಟಾಚಾರದನ್ವಯ ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುವುದು.
ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು, ಸಮುದಾಯದ ಮುಖಂಡರೊAದಿಗೆ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತದಿಂದ ಫೆ.15 ರಂದು ಸಂತ ಸೇವಾಲಾಲ್ ಜಯಂತಿ, ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ ಮತ್ತು ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಲು ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು. ಬ್ಯಾನರ್ ಅಳವಡಿಕೆಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಸೂಚನೆಗಳಿದ್ದು, ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯಲೇ ಬೇಕು. ಡಿಜೆ ಧ್ವನಿವರ್ಧಕ ಬಳಕೆ, ಬೈಕ್ ರ್ಯಾಲಿಗೆ ಅವಕಾಶವಿಲ್ಲ. ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭಕ್ತಿ-ಭಾವದಿಂದ ಮಹನೀಯರ ಜಯಂತಿ ಆಚರಿಸೋಣ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.
ಶಿಷ್ಟಾಚಾರದAತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ, ಸಂಘ-ಸAಸ್ಥೆಗಳಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಮಹನೀಯರ ಆಚಾರ-ವಿಚಾರಗಳನ್ನು ಪರಿಣಿತರಿಂದ ವಿಶೇಷ ಉಪನ್ಯಾಸ ಮೂಲಕ ತಲುಪಿಸಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು ಎಂದರು. ಜಯAತಿ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ನಡೆಯಲಿದ್ದು, ಯಾವುದೇ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು ಎಂದರು.
ವೇದಿಕೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಕಾರ್ಯವನ್ನು ನಿರ್ವಹಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದರು. ಇದೇ ವೇಳೆ ಸಮಾಜದ ಮುಖಂಡರು ಜಯಂತಿ ಕಾರ್ಯಕ್ರಮ ಯಶಸ್ವಿಗೆ ತಮ್ಮ ಸಲಹೆ-ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಾನಗರ ಪಾಲಿಕೆ, ಪೊಲೀಸ್ ಅಧಿಕಾರಿಗಳು, ಡಿಡಿಪಿಐ, ಅಧಿಕಾರಿಗಳು ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ವರದಿ:ಶಿವರಾಜ್ ಕನ್ನಡಿಗ ಕೊಟ್ಟೂರು ಕೊಟ್ಟೂರು: ಕೇಂದ್ರ ಸರ್ಕಾರವು ನರೇಗಾ ಯೋಜನೆಯ ಹೆಸರು ಬದಲಿಸುವುದರ ಜೊತೆಯಲ್ಲಿ ಜನರ ಹಕ್ಕು ಮತ್ತು ರಾಜ್ಯಗಳ ಅಧಿಕಾರ ಕಸಿದುಕೊಳ್ಳುವ ಹುನ್ನಾರವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ .ಐ.ಎಂ.ದಾರುಕೇಶ್ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ನಡೆದ ನರೇಗಾ ಬಚಾವೊ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿ ಹೊಸ ಕಾಯ್ದೆಯ ಮೂಲಕ ನರೇಗಾ ಯೋಜನೆಯನ್ನು ಜನ ವಿರೋಧಿಯಾಗಿ ರೂಪಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿ ಕಾಯ್ದೆ ಮರು ಜಾರಿಯಾಗುವವರೆಗೂ ಹೋರಾಟ ಕೈಬಿಡುವುದಿಲ್ಲ ಎಂದರು.
ಮುಖಂಡ ವೆಂಕಟೇಶ್ ತಿಪ್ಪೇಸ್ವಾಮಿ ಮಾತನಾಡಿ ವಿ ಬಿ ಜಿ ರಾಮ್ ಜಿ ಯೋಜನೆಯು ಒಕ್ಕೂಟ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತದೆ ಎಂಬ ಆತಂಕವನ್ನು ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದರು.
ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಅಡಿಕೆ ಮಂಜುನಾಥ್, ಎಪಿಎಂಸಿ ಉಪಾಧ್ಯಕ್ಷ ಎಂ.ಶಿವಣ್ಣ, ಮುಖಂಡರಾದ ಬದ್ಧಿ ಮರಿಸ್ವಾಮಿ,ತೂಲಹಳ್ಳಿ ಶಾಂತನಗೌಡ, ಕಂದಗಲ್ ಪರಶುರಾಮ ಇತರರು ಮಾತನಾಡಿದರು.
ಕೊಟ್ಟೂರೇಶ್ವರ ದೇವಸ್ಥಾನದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಮುಖ್ಯ ರಸ್ತೆಗಳ ಮೂಲಕ ಸಾಗಿ ಮಹಾತ್ಮಾ ಗಾಂಧೀಜಿ ವೃತ್ತದಲ್ಲಿ ನಡೆದ ಸಭೆಯಲ್ಲಿ ತಹಶೀಲ್ದಾರ್ ಜಿ.ಕೆ.ಅಮರೀಶ್ ಇವರಿಗೆ ಮನವಿ ಸಲ್ಲಿಸಿದರು.
ಸಂಡೂರು,ಫೆ.01: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಹಾಗೂ ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಿಯಾಶೀಲತೆಯಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಸಂಡೂರು, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಳ್ಳಾರಿ ಹಾಗೂ ಭಾಗಿದಾರರ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ ಸಂಡೂರು ಪಟ್ಟಣದ ಎಪಿಎಂಸಿ ಹತ್ತಿರದ ಸರ್ಕಾರಿ ಪ್ರೌಢ ಶಾಲೆಯ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ವಿವಿಧ ಮಾದರಿ ಶಾಲೆಗಳ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸುಸಜ್ಜಿತ ಕಟ್ಟಡ, ಮೂಲಭೂತ ಸೌಲಭ್ಯಗಳು ಮತ್ತು ಹಿತಕರ ವಾತಾವರಣ ಕಲ್ಪಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ನಿರ್ದೇಶನ ನೀಡಿದರು.
ಮಕ್ಕಳ ಹಕ್ಕುಗಳು ಸಂವಿಧಾನ ಬದ್ಧವಾಗಿದ್ದು, ಮಕ್ಕಳಿಗೆ ಕಾನೂನಾತ್ಮಕ ಸಮಸ್ಯೆ ಎದುರಾದಲ್ಲಿ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ, ಸಮಸ್ಯೆಗಳನ್ನು ಮುಕ್ತವಾಗಿ ಹೇಳಬಹುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಮಕ್ಕಳ ರಕ್ಷಣೆ ಹಾಗೂ ಕಾನೂನು ಸುರಕ್ಷತೆ ಕಾಪಾಡಲು ಮತ್ತು ಪೊಲೀಸ್ ಇಲಾಖೆಯು ಮಕ್ಕಳೊಂದಿಗೆ ಸ್ನೇಹಿ ಸಂಬಂಧ ಬೆಸೆಯಲು ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಕಾನೂನು ಸಲಹೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಕಡ್ಡಾಯವಾಗಿ ಮಾಹಿತಿ ನೀಡಬೇಕು. ಮಕ್ಕಳು ದುಶ್ಚಟಗಳಿಗೆ ಬಲಿಯಾಗಬಾರದು, ಈ ನಿಟ್ಟಿನಲ್ಲಿ ಶಾಲಾ ಆವರಣದ 100 ಮೀ. ಅಂತರದಲ್ಲಿ ಧೂಮಪಾನ, ತಂಬಾಕು ಮಾರಾಟ ಮಾಡಿದ್ದಲ್ಲಿ ಕೂಡಲೇ ತೆರವುಗೊಳಿಸಬೇಕು. ವಿಶೇಷವಾಗಿ ಶಾಲಾ ಆವರಣದಲ್ಲಿ ಪುಂಡರ ಹಾವಳಿ ತಡೆಗಟ್ಟಲು ಪೊಲೀಸ್ ಸಿಬ್ಬಂದಿ ಬೀಟ್ ಮೂಲಕ ಪರಿಶೀಲಿಸಬೇಕು ಎಂದು ಪೊಲೀಸ್ ಇಲಾಖೆಗೆ ಆಯೋಗದ ಅಧ್ಯಕ್ಷರು ನಿರ್ದೇಶನ ನೀಡಿದರು.
ಸಂವಾದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಬಸ್ ಸಮಸ್ಯೆಗಳ ಆಗರ ಕೇಳಿ ಬಂದ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆಯಾಗದಂತೆ ಸಕಾಲಕ್ಕೆ ಬಸ್ ಸಂಚಾರ ವ್ಯವಸ್ಥೆ ಒದಗಿಸಬೇಕೆಂದು ಸಾರಿಗೆ ಇಲಾಖೆಯ ಘಟಕ ನಿಯಂತ್ರಣಾಧಿಕಾರಿಗೆ ಸೂಚನೆ ನೀಡಿದರು.
ಬಾಲ್ಯ ವಿವಾಹದ ಪ್ರಚಾರ ಕುರಿತು ಪ್ರಶ್ನಿಸಿದ ವಿದ್ಯಾರ್ಥಿಗೆ ಸ್ಪಂದಿಸಿದ ಆಯೋಗದ ಅಧ್ಯಕ್ಷರು, ಬಾಲ್ಯ ವಿವಾಹವು ಕಾನೂನು ಬಾಹಿರ ಈ ಕುರಿತು ವ್ಯಾಪಕ ಪ್ರಚಾರ ಅಗತ್ಯ. ಶಾಲಾ ಆವರಣ, ಸರ್ಕಾರಿ ಸ್ಥಳಗಳು ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಶಾಶ್ವತ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಶಾಲಾ ಆವರಣ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯಾರ್ಥಿನಿಯರು ಯುವಕರು ಚುಡಾಯಿಸಿದ್ದಕ್ಕಾಗಿ ದೂರು ನೀಡಿದರೆ, ಮುಂಬರುವ ದಿನದಲ್ಲಿ ದೂರು ಕೊಟ್ಟವರಿಗೆ ಏನಾದರೂ ಸಮಸ್ಯೆ ಉಂಟಾಗುತ್ತದೇನಾ? ಎನ್ನುವ ವಿದ್ಯಾರ್ಥಿನಿಯ ಪ್ರಶ್ನೆಗೆ ಉತ್ತರಿಸಿದ ಆಯೋಗದ ಅಧ್ಯಕ್ಷರು, ದೂರುದಾರರಿಗೆ ಖಂಡಿತ ಯಾವುದೇ ರೀತಿ ಸಮಸ್ಯೆಯಾಗಲ್ಲ, ಆಯೋಗ, ಇಲಾಖೆಗಳು ಕಿರುಕುಳ ನೀಡಿದವರ ಮೇಲೆ ಸಂಪೂರ್ಣ ನಿಗಾವಹಿಸುತ್ತಾರೆ ಎಂದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
ಹೆಣ್ಣು ಮಕ್ಕಳ ತಿಂಗಳ ವೈಯಕ್ತಿಕ ಸಮಸ್ಯೆಗೆ ಕುರಿತು ಪ್ರಶ್ನಿಸಿದ ವಿದ್ಯಾರ್ಥಿನಿಗೆ ಉತ್ತರಿಸಿದ ಆಯೋಗದ ಅಧ್ಯಕ್ಷರು, ಈ ಕುರಿತು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗಿದೆ. ಒಂದು ದಿನ ರಜೆ ಮತ್ತು ಪ್ಯಾಡ್ ವಿತರಿಸಿ ಶುಚಿ-ನೈರ್ಮಲ್ಯ ಕಾಪಾಡಬೇಕೆಂದು ನ್ಯಾಯಾಲದ ಆದೇಶವಿದೆ ಎಂದು ಹೇಳಿದರು.
ಶಾಲಾ ಮಕ್ಕಳಿಗೆ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಲಾಗುತ್ತಿರುವ ಕೂಗು ಆಲಿಸಿದ ಆಯೋಗದ ಅಧ್ಯಕ್ಷರು ಶಾಲೆಗಳಲ್ಲಿ, ವಸತಿ ನಿಲಯಗಳಲ್ಲಿ ಮೂರು ತಿಂಗಳಿಗೊಮ್ಮೆಯಾದರೂ ಆರೋಗ್ಯ ತಪಾಸಣೆ ಕೈಗೊಳ್ಳಿ ಎಂದು ತಾಲೂಕು ವೈದ್ಯಾಧಿಕಾರಿಗೆ ನಿರ್ದೇಶನ ನೀಡಿದರು.
ಸಂಡೂರು ತಾಲ್ಲೂಕು ತಹಶೀಲ್ದಾರ್ ಅನಿಲ್ ಕುಮಾರ್ ಅವರು ಮಾತನಾಡಿ, ಆಧಾರ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ತಾಲೂಕು ಕಚೇರಿ ಮತ್ತು ಚೋರನೂರು, ತೋರಣಗಲ್ಲು ಹೋಬಳಿಯ ನಾಡ ಕಚೇರಿಯಲ್ಲಿ ನೂತನ ಕೊಠಡಿ ತೆರೆದಿದ್ದು, ಆಧಾರ್ ಕಾರ್ಡ್ ಸೀಡಿಂಗ್ ಸೇರಿದಂತೆ ಇತರೆ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತದೆ. ವಿಶೇಷವಾಗಿ ಶಾಲಾ ಮಕ್ಕಳ ಆಧಾರ್ ತಿದ್ದುಪಡಿಗಾಗಿ ಎರಡು ದಿನ ಮೀಸಲು ಇರಿಸಲು ವ್ಯವಸ್ಥೆ ಮಾಡಿಸಲಾಗುತ್ತದೆ ಎಂದು ಸಂವಾದದಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಬಗ್ಗೆ ಸಮಸ್ಯೆ ಕೇಳಿದ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರೂ ಹಾಗೂ ಕ್ರಿಯಾಶೀಲ ವ್ಯಕ್ತಿಗಳಾದ ಶಶಿಧರ್ ಕೋಸಂಬೆ ಅವರ ಕ್ಷೇತ್ರ ಭೇಟಿ ಸ್ವಾಗತಾರ್ಹ. ಮುಂಬರುವ ದಿನಗಳಲ್ಲಿ ಆಯೋಗದೊಡನೆ ಸಂಸದರ, ಶಾಸಕರ ಹಾಗೂ ಇಲಾಖ ಅಧಿಕಾರಿಗಳ ಸಹಕಾರದಿಂದ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಶ್ರಮವಹಿಸಲಾಗುವುದು ಎಂದು ಹೇಳಿದರು.
ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಅವರು ಮಾತನಾಡಿ, ಮಕ್ಕಳ ಸಮಸ್ಯೆಗೆ ಸ್ಪಂದಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ತಾಲೂಕು, ಹೋಬಳಿ, ಗ್ರಾಮ ಪಂಚಾಯಿತಿ ಮಟ್ಟಗಳಲ್ಲಿ ಸಂವಾದ-ಅರಿವು ಕಾರ್ಯಕ್ರಮಗಳ ಮುಖಾಂತರ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜಿ. ಅನಿಲ್ ಕುಮಾರ್, ತಾಪಂ. ಇಓ ಮಡಗಿನ ಬಸಪ್ಪ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯಾದ ಸುಭದ್ರ ದೇವಿ, ಪುರಸಭೆ ಮುಖ್ಯಾಧಿಕಾರಿ ವಿನಯ್ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್ ಅಕ್ಕಿ, ಸಮಾಜ ಕಲ್ಯಾಣ ಇಲಾಖೆಯ ಎನ್ ಕೆ ವೆಂಕಟೇಶ್, ಎಸ್ಟಿ ಅಧಿಕಾರಿ ರಂಗನಾಥ ದೇಸಾಯಿ, ಬಿ ಆರ್ ಸಿ ಶರಣಬಸಪ್ಪ, ಸಂಡೂರು ಪೊಲೀಸ್ ವೃತ್ತದ ಪಿಎಸ್ಐ ಡಾಖೇಶ್ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಸೇರಿದಂತೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.