ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ನಮ್ಮ ಕಾರುಣ್ಯ ನೆಲೆ ವೃದ್ಧಾಶ್ರಮದ ಶಾಂಭವಿ ಎಂಬ ವೃದ್ಧೆ ಅನಾರೋಗ್ಯದಿಂದ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಅಂತ್ಯಸಂಸ್ಕಾರವನ್ನು ಬಸನಗೌಡ ಬಾದರ್ಲಿ ಫೌಂಡೇಶನ್ (ರಿ)ಸಿಂಧನೂರು ಇವರ ಸದಸ್ಯರು ನೇರವೇರಿಸಿ ಮಾನವೀಯತೆ ಮೆರೆದರು ಎಂದು ಕಾರುಣ್ಯ ನೆಲೆ ವೃದ್ಧಾಶ್ರಮದ ಸಂಚಾಲಕ ಚನ್ನಬಸಯ್ಯ ಸ್ವಾಮಿ ಹರೇಟನೂರು ಅವರು ಹೇಳಿದರು.
ಈ ಸಂದರ್ಭದಲ್ಲಿ ಬಸನಗೌಡ ಬಾದರ್ಲಿ ಫೌಂಡೇಶನ್ ಮುಖಂಡರಾದ ಸೋಮನಗೌಡ ಬಾದರ್ಲಿ ಹಾಗೂ ಸದಸ್ಯರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡು ಮಾನವೀಯತೆ ಮೆರೆದರು.
ವರದಿ: ಅವಿನಾಶ ದೇಶಪಾಂಡೆ ✍️