ಗದಗ ಅ.16 : `ಸಕಾಲ ಸೇವೆಯಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಮಾಡದೇ ಸಾರ್ವಜನಿಕರಿಗೆ ಕಾಲಮಿತಿಯೊಳಗೆ ಸೇವೆ ಒದಗಿಸಬೇಕು. ಜಿಲ್ಲೆಯಲ್ಲಿ ಅವಧಿ ಮೀರಿ ಬಾಕಿ ಉಳಿದಿರುವ ಪ್ರಕರಣಗಳನ್ನು ವಿಚಾರಣೆ ನಡೆಸಿ ತ್ವರಿತವಾಗಿ ಇತ್ಯರ್ಥಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುAದರೇಶ ಬಾಬು ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಯಗಳ ಸಕಾಲ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಕಾಲ ಸೇವೆಯನ್ನು ನಾಗರಿಕರಿಗೆ ಸಮಯ ಬದ್ಧವಾಗಿ ನೀಡಿ, ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸಕಾಲದಲ್ಲಿ ಸ್ವೀಕೃತವಾಗಿರುವ ಅರ್ಜಿಗಳನ್ನು ವಿನಾಕಾರಣ ಅಥವಾ ಉದ್ದೇಶಪೂರಿತವಾಗಿ ತಿರಸ್ಕೃತಗೊಳಿಸಬಾರದು. ನಿಗದಿತ ಅವಧಿಯೊಳಗೆ ಅರ್ಜಿಗಳ ವಿಲೇವಾರಿ ಆಗುವಂತೆ ಕ್ರಮ ವಹಿಸಬೇಕು ಎಂದರು.
ಸಕಾಲ ಸೇವೆಯಲ್ಲಿ ತಾಂತ್ರಿಕ ದೋಷಗಳು ಉದ್ಭವಿಸಿದಲ್ಲಿ ಸಕಾಲಕ್ಕೆ ಸಂಬAಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಸಕಾಲ ಸೇವೆ ಒದಗಿಸುತ್ತಿರುವ ಇಲಾಖೆಯಲ್ಲಿ ಸಾರ್ವಜನಿಕರಿಗೆ ಕಾಣಿಸುವಂತೆ ಕಡ್ಡಾಯವಾಗಿ ನಾಮಫಲಕ ಅಳವಡಿಸಬೇಕು. ಪ್ರತಿನಿತ್ಯ ಅಧಿಕಾರಿಗಳು ಕಛೇರಿಗೆ ಹಾಜರಾದ ತಕ್ಷಣ ಸಕಾಲ ಸೇವೆಯಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಸಕಾಲ ಸೇವೆ ನೀಡುತ್ತಿರುವ ಜಿಲ್ಲೆಯ ಎಲ್ಲ ಇಲಾಖೆಗಳು ತ್ವರಿತ ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಚುರುಕಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಸಕಾಲ ಯೋಜನೆ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲೆಯಲ್ಲಿ 45 ಇಲಾಖೆಗಳಲ್ಲಿ 524 ಸಕಾಲ ಸೇವೆಗಳನ್ನು ಒದಗಿಸಲಾಗುತ್ತಿದ್ದು, ಸಕಾಲ ಅರ್ಜಿಗಳ ಸ್ವೀಕೃತಿಯಲ್ಲಿ ಇಳಿಕೆಯಾಗುತ್ತಿದೆ. ಅಲ್ಲದೇ, ಕೆಲವು ಇಲಾಖೆಗಳಲ್ಲಿ ಶೂನ್ಯ ಅರ್ಜಿಗಳ ಸ್ವೀಕೃತಿ ಆಗಿರುವ ಬಗ್ಗೆ ಗಮನಿಸಲಾಗಿದೆ. ಸಂಬAಧಿಸಿದ ಮೇಲಾಧಿಕಾರಿಗಳು ಕಚೇರಿಗಳಿಗೆ ಭೇಟಿ ನೀಡಿ ಸಕಾಲದಡಿ ಶೂನ್ಯ ಸ್ವೀಕೃತಿಗೆ ಕಾರಣಗಳ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದರು.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಾನಿಯಾಗಿರುವ ಬೆಳೆಗಳ ಬಗ್ಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಕೈಗೊಂಡಿರುವ ಜಂಟಿ ಬೆಳೆ ಸಮೀಕ್ಷೆ ಕಾರ್ಯ ಶೀಘ್ರವೇ ಪೂರ್ಣಗೊಳಿಸಬೇಕು. ಬೆಳೆ ಮತ್ತು ಮನೆ ಹಾನಿ ಆಗಿರುವ ಕುರಿತು ವರದಿ ಸಲ್ಲಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಗಳಲ್ಲಿ ವಾಸ ಮಾಡುತ್ತಿರುವ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಬೇಕು. ಮಳೆ ಪ್ರಮಾಣ ಕಡಿಮೆ ಆದ ನಂತರ ಜಿಲ್ಲೆಯಲ್ಲಿ ಹಾನಿಗೊಳಗಾಗಿರುವ ರಸ್ತೆಗಳನ್ನು ದುರಸ್ಥಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುAದರೇಶ ಬಾಬು ನಿರ್ದೇಶಿಸಿದರು.
ಅಪರ ಜಿಲ್ಲಾಧಿಕಾರಿ ಸತೀಶ್ಕುಮಾರ ಎಂ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಕಲ್ಲೇಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ., ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿ.ಎಲ್.ಬಾರಾಟಕೆ, ವಯಸ್ಕರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.