ತಂಬಾಕು ನಿಯಂತ್ರಣ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಕೈಜೋಡಿಸಿ

0
93

ಬಳ್ಳಾರಿ, ಅ.27. ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಠಾನ ಮಾಡಬೇಕು. ಸಾರ್ವಜನಿಕರು ತಮ್ಮ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ವಿಮ್ಸ್‍ನ ವೈದ್ಯಶಾಸ್ತ್ರದ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸುರೇಶ್ ಸಿ.ಎಂ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೆಡ್ ಕ್ರಾಸ್, ರೋಟರಿ ಲಯನ್ಸ್ ಕ್ಲಬ್ ಹಾಗೂ ಇತರ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ನಗರದ ಖಾಸಗಿ ಹೋಟಲ್‍ನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ “ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾಯ್ದೆ ಪರಿಣಾಮಕಾರಿ ಅನುಷ್ಠಾನ, ಸಾಮಥ್ರ್ಯಭಿವೃದ್ದಿ ಮತ್ತು ಮೇಲ್ವಿಚಾರಣೆ” ಕುರಿತು ವಿಶೇಷ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಇಂದಿನ ಯುವಕರು ತಂಬಾಕು ಹಾಗೂ ಇತರೆ ಮಾದಕವಸ್ತುಗಳಿಂದ ದೂರವಿದ್ದು, ತಮ್ಮ ಗುರಿಯನ್ನು ತಲುಪುವುದಕ್ಕೆ ಅಗತ್ಯ ಶ್ರಮವಹಿಸಿ ಸಾಧನೆ ಮಾಡಬೇಕು ಎಂದು ಹೇಳಿದ ಅವರು ತಂಬಾಕು ಸೇವನೆಯಿಂದ ಮಾನವ ಸಂಕುಲದ ಮೇಲೆ ಉಂಟಾಗುವ ಅನೇಕ ದುಷ್ಪರಿಣಾಮಗಳ ಬಗ್ಗೆ ವಿವರವಾಗಿ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಮಾಜ ಕಾರ್ಯಕರ್ತರಾದ ಭೋಜರಾಜ್. ಎಸ್ ಅವರು ತಂಬಾಕು ಉತ್ಪನ್ನಗಳ ಅಧಿನಿಯಮ 2003 ರ ಸೆಕ್ಷನ್ 4, 5, 6ಎ, 6ಬಿ, ಮತ್ತು 7 ರ ನಿಯಂತ್ರಣಾ ಕಾಯ್ದೆಯ ಬಗ್ಗೆ ವಿವರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿ ಡಾ.ಜನಾರ್ಧನ್.ಹೆಚ್.ಎಲ್., ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮದ ಅಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎಂ.ಎ.ಷಕೀಬ್, ಲಯನ್ಸ್ ಕ್ಲಬ್ ಅಧ್ಯಕ್ಷ ರಾಜಶೇಖರ್ ಸಿ.ಎ, ರೋಟರಿ ಕ್ಲಬ್ ಅದ್ಯಕ್ಷ ಕೆ.ಎಂ. ಶಿವ ಕುಮಾರ್ ಸೇರಿದಂತೆ ಶಮೀಮ್ ಜಕಾಲಿ, ಖಾಜಾ ಮೈನುದ್ದೀನ್, ಶಿವಸಾಗರ್ ಮತ್ತು ಮಂಜುನಾಥ ಹಾಗೂ ಪೌರರಕ್ಷಣಾದಳ ಘಟಕಾಧಿಕಾರಿಗಳಾದ ಬಸವರಾಜ ಹಾಗೂ ಸಿಬ್ಬಂದಿ ವರ್ಗ, ಗೃಹ ರಕ್ಷಕದಳದ ಘಟಕಾಧಿಕಾರಿಗಳಾದ ಸುರೇಶ್ ಮತ್ತು ಬಸವಲಿಂಗ ಹಾಗೂ ಸಿಬ್ಬಂದಿ ವರ್ಗದವರು, ರೆಡ್ ಕ್ರಾಸ್ ಸ್ವಯಂಸೇವಕರು ಇದ್ದರು.

LEAVE A REPLY

Please enter your comment!
Please enter your name here