ಬಳ್ಳಾರಿ,ನ.17: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಒಂದು ದಿನದ ಚಿಗುರು, ಯುವ ಸೌರಭ ಮತ್ತು ಸಾಂಸ್ಕøತಿಕ ಸೌರಭ ಕಾರ್ಯಕ್ರಮಕ್ಕೆ ಆಸಕ್ತ ಬಾಲ, ಯುವ ಹಾಗೂ ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಭಾಗವಹಿಸಿದ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ್.ಕೆ.ರಂಗಣ್ಣನವರ್ ತಿಳಿಸಿದ್ದಾರೆ.
ಚಿಗುರು ಕಾರ್ಯಕ್ರಮದಲ್ಲಿ 6 ರಿಂದ 14 ವರ್ಷದ ವಯೋಮಾನದ ಪ್ರತಿಭಾವಂತ ಬಾಲ ಕಲಾವಿದರು ಅರ್ಜಿ ಸಲ್ಲಿಸಬಹುದು, ಯುವ ಸೌರಭ ಕಾರ್ಯಕ್ರಮದಲ್ಲಿ 15 ರಿಂದ 30 ವರ್ಷದ ಯುವ ಪ್ರತಿಭಾವಂತ ಕಲಾವಿದರು ಅರ್ಜಿ ಸಲ್ಲಿಸಲು ಆಹ್ವಾನಿಸಿಲಾಗಿದೆ. ಸಾಂಸ್ಕøತಿಕ ಸೌರಭ ಕಾರ್ಯಕ್ರಮದಲ್ಲಿ ಆಕಾಶವಾಣಿ ಹಾಗೂ ದೂರದರ್ಶನದಲ್ಲಿ ಭಾಗವಹಿಸಿದ ಕಲಾವಿದರುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
ಜಿಲ್ಲಾ ವ್ಯಾಪ್ತಿಯ ಕಲಾವಿದರುಗಳಿಗೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಜಾನಪದ ಸಂಗೀತ, ಜಾನಪದ ನೃತ್ಯ, ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ನೃತ್ಯ, ಸಮೂಹನೃತ್ಯ, ಭಾವಗೀತೆಗಳ ಗಾಯನ ಹಾಗೂ ಇತರೆ ವಾದ್ಯ ಸಂಗೀತಗಳನ್ನು ಈ ಕಾರ್ಯಕ್ರಮಗಳಲ್ಲಿ ಬಿಂಬಿಸುವುದು ಮುಖ್ಯ ಉದ್ದೇಶವಾಗಿದೆ.
ಕಲಾವಿದರು/ಕಲಾತಂಡದವರು ಅರ್ಜಿಗಳನ್ನು ನ.25 ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಾಂಸ್ಕøತಿಕ ಸಮುಚ್ಚಯ, ಡಾ.ರಾಜ್ಕುಮಾರ್ ರಸ್ತೆ, ಬಳ್ಳಾರಿ ಕಚೇರಿಗೆ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗೆ ದೂ.ಸಂ.08392-275182 ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.