ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರಿಗೆ ಬಿಗ್ ಶಾಕ್ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನೂ ಯಾವುದೇ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳು ಆರಂಭವಾಗದ ಕಾರಣ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿಲ್ಲ. ಹೀಗಾಗಿ ಕಳೆದ ವರ್ಷ ಸೇವೆ ಸಲ್ಲಿಸಿದವರಿಗೆ ಕೋವಿಡ್ ಸಮಯದಲ್ಲಿ ವೇತನ ನೀಡುವ ಪ್ರಸ್ತಾಪವಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಪ್ರತಿ ವರ್ಷ ಶೈಕ್ಷಣಿಕ ವರ್ಷ ಪ್ರಾರಂಭವಾದ ಮೇಲೆ ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕ ನಡೆಯುತ್ತದೆ. ಕಳೆದ ಸಾಲಿನಲ್ಲಿ ನೇಮಕ ಮಾಡಿಕೊಂಡಿದ್ದವರು ಮಾರ್ಚ್ 30 ರವರೆಗೆ ಕೆಲಸ ಮಾಡಿದ್ದಾರೆ. ಅಲ್ಲಿಯವರೆಗೆ ಅವರ ವೇತನ ಪೂರ್ಣಗೊಳಿಸಿದ್ದೇವೆ. ಕೋವಿಡ್ ಸಮಯದಲ್ಲಿ ವೇತನ ನೀಡುವ ಪ್ರಶ್ನೆ ಬರುವುದಿಲ್ಲ ಎಂದು ಹೇಳಿದ್ದಾರೆ.