ಹೊಲಿಗೆ ಯಂತ್ರ : ಅರ್ಜಿ ಆಹ್ವಾನ

0
123

ಬಳ್ಳಾರಿ,ಜ.15 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಜಿಲ್ಲೆಯಲ್ಲಿರುವ ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಾನುಭವಿಗಳು ಶೇ.40 ಅಥವಾ ಅದಕ್ಕಿಂತ ಹೆಚ್ಚು ಶ್ರವಣದೋಷವುಳ್ಳವರಾಗಿರಬೇಕು, ವೈದ್ಯಕೀಯ ಪ್ರಾಧಿಕಾರದಿಂದ ಪಡೆದ ವಿಕಲಚೇತನರ ಗುರುತಿನ ಚೀಟಿ/ಯು.ಡಿ.ಐ.ಡಿ ಕಾರ್ಡ್‍ನ್ನು ಹೊಂದಿರಬೇಕು. ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡಿರುವ ಬಗ್ಗೆ ದಾಖಲಾತಿ ಹಾಗೂ ವೃತ್ತಿಗೆ ಸಂಬಂಧಿಸಿದ ಅನುಭವ ಪ್ರಮಾಣ ಪತ್ರ ಹೊಂದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ, ಭಾವಚಿತ್ರ(ಎರಡು), ಆಧಾರ ಕಾರ್ಡ್, ಚುನಾವಣೆ ಗುರುತಿನ ಚೀಟಿ, ರಾಜ್ಯದಲ್ಲಿ ಕನಿಷ್ಠ 10 ವರ್ಷಗಳಿಂದ ವಾಸವಾಗಿರುವ ಬಗ್ಗೆ ಪ್ರಮಾಣ ಪತ್ರ ಹಾಗೂ ಇತರೆ ದಾಖಲಾತಿಗಳೊಂದಿಗೆ ಇದೇ ಜ.25 ರೊಳಗಾಗಿ ಆಯಾ ತಾಲೂಕು ಪಂಚಾಯತಿಯಲ್ಲಿರುವ ಎಮ್.ಆರ್.ಡಬ್ಲ್ಯೂಗಳಲ್ಲಿ ಅವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ದೂ.ಸಂ.08392-267886, ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರ ದೂ.ಸಂ. ಬಳ್ಳಾರಿ ದೂ.ಸಂ.8880875620, ಸಿರುಗುಪ್ಪ ದೂ.ಸಂ.9743509698, ಸಂಡೂರು ದೂ.ಸಂ.9632052270, ಕೂಡ್ಲಿಗಿ ದೂ.ಸಂ.9980576553, ಹೊಸಪೇಟೆ ದೂ.ಸಂ.9945252991, ಹಡಗಲಿ ದೂ.ಸಂ.9900890403, ಹಗರಿಬೊಮ್ಮನಹಳ್ಳಿ ದೂ.ಸಂ.9741185924, ಹರಪನಹಳ್ಳಿ ತಾ ದೂ.ಸಂ.9110246455 ರಲ್ಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂ.ಸಂ.08392-267886 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here