ಬಳ್ಳಾರಿ,ಜ.23 : ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ಇವರ ಸಂಯುಕ್ತ ಆಶ್ರಯದಲ್ಲಿ ಮಹಾವಿದ್ಯಾಲಯದ ಮೈದಾನದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ‘ಆಯುಷ್’ ನೌಕರರ ‘ತಾರಾನಾಥ ಕಪ್ -2021’ ಕ್ರಿಕೆಟ್ ಪಂದ್ಯಾವಳಿಗೆ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು ಶನಿವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷರಾದ ದಮ್ಮೂರ್ ಶೇಖರ್, ಶ್ರೀಕೃಷ್ಣ ದೇವರಾಯ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಮರ್ಚೆಡ್ ಮಲ್ಲಿಕಾರ್ಜುನ, ಸಹಾಯ ಆಯುಕ್ತರಾದ ರಮೇಶ್ ಕೊನರೆಡ್ಡಿ,ಕಾಲೇಜಿನ ಪ್ರಾಚಾರ್ಯರಾದ ಡಾ.ಸ್ಯೆಯದ್ ಅತ್ತರ್ ಫಾತಿಮಾ, ಕಾಲೇಜಿನ ಪ್ರಾಧ್ಯಾಪಕ ಡಾ.ರಾಜಶೇಖರ್ ಗಾಣಿಕರ್, ಡಾ ಅಹಲ್ಯ, ಡಾ. ಗಜಾನನ ಹೆಗಡೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಶಿವಾಜಿರಾವ್ ಮತ್ತು ಕ್ರೀಡಾ ಸಿಬ್ಬಂದಿಗಳು ಹಾಜರಿದ್ದರು.