ಬಳ್ಳಾರಿ,ಜ.28 : ಜಿಲ್ಲಾಡಳಿತದ ವತಿಯಿಂದ ನಗರದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿ ಆವರಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಗುರುವಾರ ಆಚರಿಸಲಾಯಿತು.
ನಿಜಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಜಿಲ್ಲಾ ಅಂಬಿಗರ ಚೌಡಯ್ಯ ಸಂಘದ ಅಧ್ಯಕ್ಷ ಬಿ.ಮೌಲಾಲಿ, ಗೌರವ ಅಧ್ಯಕ್ಷ ಹನುಮಂತಪ್ಪ ಅವರು ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಕೆ.ಪಂಪಾಪತಿ, ಬಿ.ಸಿದ್ದಪ್ಪ,ಬಿ.ವೀರಭದ್ರಪ್ಪ, ಆಧ್ಯಪ್ಪ,ತಿಮ್ಮಪ್ಪ ಕಂಪ್ಲಿ, ಬಿ.ನಾಗಲಾಪುರ, ಗೊನಾಲು ಬಸವರಾಜ, ದ್ರಾಕ್ಷಾಯಣಿ, ಪದ್ಮ, ಉಮಾಪತಿ. ತಿ. ಭುವನಹಳ್ಳಿ ಸೇರಿದಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿ ಇದ್ದರು.