ಧಾರವಾಡ ಫೆ.1: ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ಮಡಿವಾಳ ಮಾಚಿದೇವ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಮಡಿವಾಳ ಮಾಚಿದೇವ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಪ್ಷಾರ್ಪಣೆ ಮಾಡಿ ನಮಿಸಿದರು. ಈ ಸಂಧರ್ಬದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮಹಾನಗರ ಪಾಲಿಕೆಯ ಆಯುಕ್ತರಾದ ಸುರೇಶ ಇಟ್ನಾಳ, ಜಿ.ಪಂ.ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳ, ಡಿ.ಎಸ್.ಓ ಸಾಯಿಕುಮಾರ, ಲೊಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಎಸ್.ಬಿ.ಚೌಡನ್ನವರ, ಎ.ಇ.ಓ ಎಲ್.ಎಮ್.ಬಿಳಗಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಗಣ್ಯಮಾನ್ಯರು ಉಪಸ್ಥಿತರಿದ್ದರು.