ಧಾರವಾಡ ಫೆ.13: ತಾಲ್ಲೂಕಿನ ಮುರಕಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಗನವಾಡಿ ಕಟ್ಟಡವನ್ನು ಜಿಲ್ಲಾ ಪಂಚಾಯತ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ ಸದಸ್ಯ ನಿಂಗಪ್ಪ ಘಾಟೀನ, ತಾಲೂಕ ಪಂಚಾಯತ ಅಧ್ಯಕ್ಷ ರವಿವರ್ಮ ಪಾಟೀಲ, ಉಪಾಧ್ಯಕ್ಷೆ ಫಕೀರವ್ವ ನಾಯ್ಕರ್, ಗ್ರಾ.ಪಂ.ಅಧ್ಯಕ್ಷೆ ಮಲ್ಲಮ್ಮ ಹರಿಜನ, ಉಪಾಧ್ಯಕ್ಷ ಮಂಜುನಾಥ ಸಲ್ಲಿಕೇರಿ, ಸದಸ್ಯರಾದ ನಾಗರಾಜ ಘಾಟೀನ, ಗೀತಾ ಆಯಟ್ಟಿ, ಎಸ್.ಡಿ.ಎಂ.ಸಿ.ಅಧ್ಯಕ್ಷ ಫಕೀರಪ್ಪ ಕೋನಪ್ಪನವರ ಸೇರಿದಂತೆ ಗ್ರಾಮದ ಹಿರಿಯರು ಉಪಸ್ಥಿತರಿದ್ದರು, ಮುಖ್ಯೋಪಾಧ್ಯಾಯರಾದ ಎಸ್.ಬಿ.ಕೇಸರಿ ಸ್ವಾಗತಿಸಿದರು. ಅಂಗನವಾಡಿ ಮೇಲ್ವಿಚಾರಕಿ ರೇಣುಕಾ ಅಸುಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು,ಎಸ್. ಎ.ಕುಪ್ಪೇಲೂರ ನಿರೂಪಿಸಿದರು.