ಬಳ್ಳಾರಿ,ಫೆ.18 : ಕೊಟ್ಟೂರಿನ ಶ್ರೀ ಗುರುಬಸವೇಶ್ವರಸ್ವಾಮಿ ದೇವಸ್ಥಾನದ ಜಾತ್ರೆಯ ವಾರ್ಷಿಕ ಕಾರ್ಯಕ್ರಮಗಳು ಮಾ.03 ರಿಂದ ಮಾ.13 ರ ವರೆಗೆ ಜರುಗಲಿದ್ದು, ಮಾ.07 ರಂದು ಸಂಜೆ ಶ್ರೀ ಸ್ವಾಮಿಯ ಮಹಾರಥೋತ್ಸವ ಬಹುವಿಜೃಂಭಣೆಯಿಂದ ನಡೆಯಲಿದೆ ಎಂದು ಶ್ರೀ ಗುರು ಬಸವೇಶ್ವರಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಕೊಟ್ಟೂರು ಕ್ಷೇತ್ರಕ್ಕೆ ಬರಲಿರುವ ಹಿನ್ನೆಲೆಯಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳು,ಪೊಲೀಸ್ ಬಂದೋಬಸ್ತ್,ಬಸ್ ಮತ್ತು ಪ್ರಚಾರದ ವ್ಯವಸ್ಥೆ ಸೇರಿದಂತೆ ಇನ್ನೀತರ ವ್ಯವಸ್ಥೆಗಳನ್ನು ಮಾಡುವುದಕ್ಕೆ ಸಂಬಂಧಿಸಿದಂತೆ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯಕ್ ಅಧ್ಯಕ್ಷತೆಯಲ್ಲಿ ಫೆ.22 ರಂದು ಬೆಳಗ್ಗೆ 11ಕ್ಕೆ ಶ್ರೀ ಗುರು ಬಸವೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜಾತ್ರೆಯ ಪೂರ್ವಭಾವಿ ಸಿದ್ಧತಾ ಸಭೆ ನಡೆಯಲಿದೆ.
ಈ ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಕಳೆದ ಸಾಲಿನ ಜಾತ್ರೆಯಲ್ಲಿ ಕೈಗೊಂಡಿರುವ ಮಾಹಿತಿ ಹಾಗೂ ಈ ಸಾಲಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ವಿವರಗಳೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.