ಗಾಂಧಿಭವನ ನಿರ್ಮಾಣ ಕಾಮಗಾರಿ ಜಿಲ್ಲಾಧಿಕಾರಿ ಭೇಟಿ,ಪರಿಶೀಲನೆ

0
95

ಧಾರವಾಡ ಫೆ. 21: ನಗರದ ಹೊಸ ಬಸ್‍ನಿಲ್ದಾಣದ ಬಳಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸುತ್ತಿರುವ ಗಾಂಧಿಭವನ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಅವರು ಇಂದು ಭೇಟಿ ನೀಡಿ ,ಪರಿಶೀಲನೆ ನಡೆಸಿ, ಕಾಮಗಾರಿಯನ್ನು ಉತ್ತಮ ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.

ಕಾಮಗಾರಿ ನಿರ್ವಹಿಸುತ್ತಿರುವ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ (ಕೆಆರ್‍ಐಡಿಸಿಎಲ್) ಸಹಾಯಕ ಇಂಜಿನಿಯರ್ ಫರೀದಾ ನದಾಫ್ ಅವರು, 29 ಗುಂಟೆ ನಿವೇಶನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡ,ನೀಲನಕ್ಷೆ ಮತ್ತಿತರ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here