ಬಳ್ಳಾರಿ,ಫೆ.26; ಬಳ್ಳಾರಿ ನಗರದ ಕೋಟೆ ಶ್ರೀ ಮಲ್ಲೇಶ್ವರ ದೇವಾಲಯದ ಹತ್ತಿರ ಬುಡಾ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಮತ್ತು ಪೂರ್ಣಗೊಂಡ ಕಾಮಗಾರಿಗಳನ್ನು ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ್ ರೆಡ್ಡಿ ಮತ್ತು ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಗುರುವಾರ ಸಂಜೆ ಉದ್ಘಾಟಿಸಿದರು.
10.08 ಲಕ್ಷ ರೂ. ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಹಾಗೂ 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹೈ ಮಾಸ್ಟ್ ಲೈಟ್ ಮತ್ತು 10.92 ಲಕ್ಷ ರೂ. ವೆಚ್ಚದಲ್ಲಿ ಅಳವಡಿಸಿರುವ ವಿದ್ಯುತ್ ದೀಪಗಳ ಕಾಮಗಾರಿಗಳನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರಾಬಕೊ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ವೀರಶೇಖರ್ ರೆಡ್ಡಿ, ಮುಖಂಡರಾದ ಶ್ರೀನಿವಾಸ್ ಮೋತ್ಕರ್,ಗೋವಿಂದರಾಜುಲು, ರಾಜು,ಶ್ರವಣ್ ಕುಮಾರ್ ಮತ್ತು ಮುಜರಾಯಿ ಅಧಿಕಾರಿಗಳಾದ ಹನುಮಂತಪ್ಪ, ಬುಡಾ ಆಯುಕ್ತ ವೀರೇಂದ್ರ ಕುಂದುಗೋಳ, ಎಂಜನಿಯರ್ ಗಳಾದ ರವಿಶಂಕರ್, ನಹೀಂ, ಪವನ್ ದೇಸಾಯಿ ಹಾಗೂ ಗುತ್ತಿಗೆದಾರ ವೀರೇಶ್ ಅವರು ಉಪಸ್ಥಿತರಿದ್ದರು.