ಬಳ್ಳಾರಿ,ಮಾ.01: ಬಳ್ಳಾರಿ ನಗರದ ಪ್ರಾಧಿಕಾರವು ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ನ ಭಾಗವಾಗಿದ್ದು, ಅಭಿವೃದ್ಧಿ ದೃಷ್ಟಿಯಿಂದ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಜಿಲ್ಲಾ ಖಾನಿಜ ಪ್ರತಿಷ್ಠಾನ ಟ್ರಸ್ಟ್ನ ಸದಸ್ಯರನ್ನಾಗಿ ನೇಮಕ ಮಾಡುವಂತೆ ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಹಾಗೂ ಗಣಿ, ಭೂವಿಜ್ಞಾನ ಸಚಿವರಾದ ಪ್ರಹ್ಲಾದ್ ಜೋಷಿಯವರಿಗೆ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬುಡಾ ಆಯುಕ್ತರಾದ ವೀರೇಂದ್ರ ಕುಂದಗೋಳ, ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಎಂಜನಿಯರ್ ರವಿಶಂಕರ್, ಪ್ರಾಧಿಕಾರದ ಕನ್ಸಲ್ಟೆಂಟ್ ಸುಭಾಶ್ ಅವರು ಉಪಸ್ಥಿತರಿದ್ದರು.