ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಕ್ಯಾಂಪ್, ವಿರುಪಾಪುರ,ಅರಳಹಳ್ಳಿ, ಸೇರಿದಂತೆ ಈ ದಾರಿಯಲ್ಲಿ ಬೆಳಿಗ್ಗೆ 7ಗಂಟೆಯಿಂದ 9ರವರೆಗೆ ಸಾರಿಗೆ ಸಂಸ್ಥೆಯ ನಗರ ಸಾರಿಗೆ ಬಸ್ ಸಂಚಾರ ಇಲ್ಲದ ಕಾರಣ ಬಸ್ ಸಂಚಾರವನ್ನು ಸರಿಯಾದ ಸಮಯಕ್ಕೆ ಹೆಚ್ಚಿಸಿ ಎಂದು ಸಿಂಧನೂರಿನ ಕೆಎಸ್ಸಾರ್ಟಿಸಿ ಡಿಪೋ ವ್ಯವಸ್ಥಾಪಕರಿಗೆ ಮಲ್ಲದಗುಡ್ಡ ಗ್ರಾಮಪಂಚಾಯತ್ ಸದಸ್ಯ ರವಿಗೌಡ ಮಲ್ಲದಗುಡ್ಡ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಅವರು ಈ ಭಾಗದಿಂದ ಸಿಂಧನೂರು ನಗರಕ್ಕೆ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಮತ್ತು ತುರ್ತು ಸಂದರ್ಭದಲ್ಲಿ ಆಸ್ಪತ್ರೆ ಸೇರಿದಂತೆ ವಿವಿಧ ಕಾರ್ಯಗಳಿಗೆ ನಗರಕ್ಕೆ ತೆರಳುವ ವಯೋವೃದ್ಧರಿಗೆ , ಸಾರ್ವಜನಿಕರಿಗೆ ಸರಿಯಾದ ಸಮಯಕ್ಕೆ ಬಸ್ ಸಂಚಾರ ಇಲ್ಲದಿರುವುದರಿಂದ ತುಂಬಾ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ಬಗೆಹರಿಸಲು ಡಿಪೋ ವ್ಯವಸ್ಥಾಪಕರು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಶಾಲಾ ಕಾಲೇಜು ವಿದ್ಯಾರ್ಥಿಗಳ ಜೊತೆಗೂಡಿ ಹೋರಾಟಕ್ಕೆ ಮುಂದಾಗುತ್ತೇವೆ ಎಂದರು.
ವರದಿ: ಅವಿನಾಶ ದೇಶಪಾಂಡೆ