ಬಳ್ಳಾರಿ,ಮಾ.10; ಬಳ್ಳಾರಿ ಮಹಾನಗರ ಪಾಲಿಕೆ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮತ್ತು ನೋಪಾಸನಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಬಳ್ಳಾರಿ ಸ್ವಸ್ಥ ಬಳ್ಳಾರಿ ಅಭಿಯಾನ ನಿಮಿತ್ತ ಬಳ್ಳಾರಿ ಮೇಳ ಕಾರ್ಯಕ್ರಮವನ್ನು ನಗರದ ಬಿಎಸ್ಎನ್ಎಲ್ ಕಾಲೋನಿಯಲ್ಲಿ ಸೋಮವಾರ ಸಂಜೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಉದ್ಘಾಟಿಸಿ ಮಾತನಾಡಿದರು. ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳ್ಳುವುದರ ಮೂಲಕ ಬಳ್ಳಾರಿ ನಗರವನ್ನು ಸ್ವಚ್ಚ ಮತ್ತು ಸುಂದರವಾಗಿ ರೂಪಿಸುವ ನಿಟ್ಟಿನಲ್ಲಿ ಎಲ್ಲರ ನಾಗರಿಕರು ಕೈಜೋಡಿಸಿ ಎಂದರು.
ಸ್ವಚ್ಛ ನಗರವನ್ನು ನಿರ್ಮಾಣ ಮಾಡಲು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಯಾವ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎನ್ನವುದರ ಬಗ್ಗೆ ತಿಳಿಸಿದರು. ಕಸವನ್ನು ಒಣ ಕಸ ಮತ್ತು ಹಸಿ ಕಸ ಎಂದು ವಿಂಗಡಿಸಿ ಸಂಸ್ಕರಣೆ ಮಾಡುವುದರಿಂದ ಆಗುವ ಅನುಕೂಲಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಮಹಿಯರಿಗೆ ಹಸಿ ಮತ್ತು ಒಣಕಸದ ಕಾಂಪೋಸಿಂಗ್ ಮಾಡುವ ವಿಧಾನದ ಬಗ್ಗೆ ತಿಳಿಸಿಕೊಡುವುದರ ಜೊತೆಗೆ ಕಾಂಪೋಸಿಂಗ್ ಮಾಡಿದ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಿ ಯಾವ ರೀತಿಯಲ್ಲಿ ತೋಟಗಳಿಗೆ ಉಪಯೋಗಿಸಬಹುದು ಎನ್ನವುದನ್ನು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಡಾ.ಹನುಮಂತಪ್ಪ, ಬಿಎಸ್ಎನ್ಎಲ್ನ ಡಿಜಿಎಂ ಲೋಕೇಶ್ ನಾಯ್ಕ್, ರೆಡ್ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎ.ಷಕೀಬ್ ಹಾಗೂ ಇತರರು ಇದ್ದರು.