ಕೋವಿಡ್-19 ಲಸಿಕೆ ಪಡೆದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ಕೋವಿಡ್-19 ಲಸಿಕೆ ಪಡೆದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

0
109

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 12 ದೊಡ್ಡಬಳ್ಳಾಪುರದ‌ ಸಾರ್ವಜನಿಕ ಆಸ್ಪತ್ರೆಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಕೋವಿಡ್-19 ಲಸಿಕೆ ಪಡೆದರು.
ಕೋವಿಡ್-19 ಲಸಿಕೆ ಪಡೆದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಅವರು ಲಸಿಕೆ ಸುರಕ್ಷಿತವಾಗಿದ್ದು, ಲಸಿಕೆ ಪಡೆಯುವುದರಿಂದ ಯಾವುದೇ ದುಷ್ಪರಿಣಾಮಗಳು ಉಂಟಾಗುವುದಿಲ್ಲ ಎಂದರಲ್ಲದೆ, ಸಾರ್ವಜನಿಕರು ಯಾವುದೇ ಊಹಾ-ಪೋಹಗಳಿಗೆ ಎಡೆಮಾಡಿಕೊಡದೇ ಲಸಿಕಾ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರಮೇಶ್ ಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಟಿ.ಶಿವರಾಜು, ತಾಲ್ಲೂಕು ವೈದ್ಯಾಧಿಕಾರಿ‌ ಡಾ.ಪರಮೇಶ್ವರ ಸೇರಿದಂತೆ ವೈದ್ಯಾಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here