ವೃತ್ತಿನಿರತ ವಕೀಲರಿಗೆ ಸಹಾಯಧನ:ಅರ್ಜಿ ಆಹ್ವಾನ

0
102

ಬಳ್ಳಾರಿ,ಮಾ.18: ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ 2018-19ನೇ ಸಾಲಿನ ಶೇ.24.10ರ ಯೋಜನೆಯಡಿ ಬಳ್ಳಾರಿ ನಗರ ವ್ಯಾಪ್ತಿಯ ಪರಿಶಿಷ್ಟ ಜಾತಿಯ ವೃತ್ತಿನಿರತ ವಕೀಲರುಗಳಿಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು,ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಮಹಾನಗರಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಏ.17 ಕೊನೆಯ ದಿನಾಂಕವಾಗಿದ್ದು, ವೃತ್ತಿ ಪ್ರಾರಂಭಿಸಲು ನೊಂದಣಿ ಮಾಡಿದ ವರ್ಷದಲ್ಲಿ ಅರ್ಜಿ ಸಲ್ಲಿಸಿದವರಿಗೆ ಆನ್‍ಲೈನ್ ಕಾನೂನು ಪುಸ್ತಕ ಭಂಡಾರಕ್ಕೆ ಐದು ವರ್ಷಗಳ ಅವಧಿಗೆ ನೀಡಬೇಕಾದ ಚಂದಾ ಶುಲ್ಕವನ್ನು ನೇರವಾಗಿ ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ.
ಸಲ್ಲಿಸಬೇಕಾದ ದಾಖಲಾತಿಗಳು; ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬಾರ್ ಕೌನ್ಸಿಲ್‍ನಲ್ಲಿ ನೋಂದಣಿಯಾದ ಪ್ರಮಾಣ ಪತ್ರ, ರೇಷನ್ ಕಾರ್ಡ್/ಗುರುತಿನ ಚೀಟಿ/ಆಧಾರ್ ಕಾರ್ಡ್, ಇತ್ತೀಚಿನ ಮೂರು ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here