ಕಾರುಣ್ಯ ನೆಲೆವೃದ್ದಾಶ್ರಮದಲ್ಲಿ ಸಿದ್ದಗಂಗಾ ಶ್ರೀಗಳ ಜಯಂತೋತ್ಸವ ಆಚರಣೆ

0
147

ಸಿಂಧನೂರಿನ ಕಾರುಣ್ಯ ನೆಲೆವೃದ್ದಾಶ್ರಮದಲ್ಲಿ ಜೀವ ಸ್ಪಂದನ ಸೇವಾ ಸಂಸ್ಥೆ(ರಿ) ರಾಯಚೂರು ಹಾಗೂ ಕರ್ನಾಟಕ ಯುವಶಕ್ತಿ ಸೇವಾ ಟ್ರಸ್ಟ್ (ರಿ) ವತಿಯಿಂದ ತ್ರಿವಿಧ ದಾಸೋಹಿ ಶ್ರೀ ದಿ.ಡಾ. ಶಿವಕುಮಾರ ಮಹಾಸ್ವಾಮಿಗಳು ಸಿದ್ಧಗಂಗಾಮಠ ತುಮಕೂರು ಇವರ 114ನೇ ಜಯಂತೋತ್ಸವವನ್ನು ಶ್ರೀಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವುದರ ಮೂಲಕ ಎಲ್ಲ ವೃದ್ಧರಿಗೆ ಸಿಹಿ ಪದಾರ್ಥಗಳನ್ನು ಹಣ್ಣುಹಂಪಲುಗಳನ್ನು ವಿತರಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮೊದಲ ಬಾರಿಗೆ ಆಶ್ರಮಕ್ಕೆ ಆಗಮಿಸಿದ ಕರ್ನಾಟಕ ಯುವಶಕ್ತಿ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಸಂತೋಷ್ ಅಂಗಡಿ ಅವರನ್ನು ಸನ್ಮಾನಿಸಲಾಯಿತು. ಜೀವ ಸ್ಪಂದನ ಸೇವಾ ಸಂಸ್ಥೆ ಕಾರ್ಯದರ್ಶಿ ಅವಿನಾಶ್ ದೇಶಪಾಂಡೆ, ಕಾರುಣ್ಯ ನೆಲೆವೃದ್ದಾಶ್ರಮದ ಆಡಳಿತಾಧಿಕಾರಿ ಚನ್ನಬಸಯ್ಯಸ್ವಾಮಿ ಹಿರೇಮಠ ಹರೇಟನೂರು, ಮೇಲ್ವಿಚಾರಕಿ ಶ್ರೀಮತಿ ಸುಜಾತ ಚನ್ನಬಸಯ್ಯಸ್ವಾಮಿ ಹಿರೇಮಠ ಹರೇಟನೂರು, ಸದಸ್ಯರಾದ ವಿರಭದ್ರಗೌಡ ಸೇರಿದಂತೆ ಹಲವರಿದ್ದರು.

LEAVE A REPLY

Please enter your comment!
Please enter your name here