ರಾಯಚೂರಿನ ರೋಟರಿ ಕ್ಲಬ್ ವತಿಯಿಂದ ಚನ್ನಬಸಯ್ಯಸ್ವಾಮಿ ಹಿರೇಮಠ ಹರೇಟನೂರ್ ಗೆ ಉತ್ತಮ ಸಮಾಜ ಸೇವಕ ಪ್ರಶಸ್ತಿ ಪ್ರದಾನ

0
135

ರಾಯಚೂರು ನಗರದ ಹೈದ್ರಾಬಾದ್ ರಸ್ತೆಯಲ್ಲಿರುವ ಶನಿವಾರ ಸಂಜೆ ಸಂತೋಷ ಹೋಟೆಲ್ ನಲ್ಲಿ ರೋಟರಿ ಕ್ಲಬ್ ವತಿಯಿಂದ ಆಯೋಜಿಸಿದ್ದ ರಾಯಚೂರು ಈಸ್ಟ್ ಎಂಬ ಕಾರ್ಯಕ್ರಮದಲ್ಲಿ ಸಿಂಧನೂರಿನ ಕಾರುಣ್ಯ ನೆಲೆ ವೃದ್ಧಾಶ್ರಮದ ಆಶ್ರಮದ ಆಡಳಿತಾಧಿಕಾರಿಗಳಾದ ಶ್ರೀ ಚನ್ನಬಸವ ಸ್ವಾಮಿ ಹಿರೇಮಠ ಹರೇಟನೂರು ಇವರನ್ನು “ಉತ್ತಮ ಸಮಾಜ ಸೇವಕ“ ಎಂಬ ಪ್ರಶಸ್ತಿ ನೀಡುವುದರ ಮೂಲಕ ಗೌರವಿಸಿ ಸನ್ಮಾನಿಸಿದರು.

ಈ ಸಮಯದಲ್ಲಿ ನಿರಂತರವಾಗಿ ಕಾರುಣ್ಯ ಆಶ್ರಮಕ್ಕೆ ರೋಟರಿ ಕ್ಲಬ್ ವತಿಯಿಂದ ಸಹಾಯ ಸಹಕಾರ ಇರುತ್ತದೆ ಎಂದ ರಾಯಚೂರು ರೋಟರಿ ಕ್ಲಬ್ ನ ಚಿನ್ನಪ್ಪರೆಡ್ಡಿ District Governer ಆಶ್ರಮದ ಸೇವೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿ ಟ್ರಸ್ಟ್ ನ ಎಲ್ಲ ಪದಾಧಿಕಾರಿಗಳಿಗೆ ಹಾಗೂ ಆಡಳಿತ ಮಂಡಳಿಗೆ ಧನ್ಯವಾದಗಳನ್ನು ತಿಳಿಸಿದರು.

ವರದಿ:ಅವಿನಾಶ ದೇಶಪಾಂಡೆ

LEAVE A REPLY

Please enter your comment!
Please enter your name here