ಮಂಡ್ಯ. ಏ 26:-ಇಂದು ಜಿಲ್ಲೆಯ ಮಂಡ್ಯ ತಾಲ್ಲೂಕು ಒಕ್ಕಲಿಗರ ಭವನ ಕೋವಿಡ್ ಕೇರ್ ಕೇಂದ್ರಕ್ಕೆ ಸ್ವತಃ ಪಿಪಿಟಿ ಕಿಟ್ ಧರಿಸಿ ಸೆಂಟರ್ ಒಳಗೆ ಹೋಗಿ, ಕೋವಿಡ್ ಸೋಂಕಿತರೊಂದಿಗೆ ಮಂಡ್ಯ ಜಿಲ್ಲಾಧಿಕಾರಿಗಳಾದ ಎಸ್. ಅಶ್ವಥಿ ಅವರು ಮುಕ್ತವಾಗಿ ಮಾತನಾಡಿ ಅವರ ಸಮಸ್ಯೆಗಳನ್ನು ಆಲಿಸಿದರು.
ತಾಲ್ಲೂಕಿನ ಆರೋಗ್ಯ ಅಧಿಕಾರಿಗಳಿಗೆ ಅಲ್ಲಿನ ಕೋವಿಡ್ ಕೇಂದ್ರಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳನ್ನು ವಿಚಾರಿಸಿದರು ಹಾಗೂ ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಬರಲಾಯಿತು.
ಕೋವಿಡ್ ವ್ಯಕ್ತಿಗಳನ್ನು ಮಾತನಾಡಿಸಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಮತ್ತು ಊಟ, ಬಿಸಿ ನೀರಿನ ವ್ಯವಸ್ಥೆ, ಸ್ವಚ್ಛತೆ ಮತ್ತು ಉತ್ತಮವಾದ ಆಹಾರದ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು ಹಾಗೂ
ಕೋವಿಡ್ ವ್ಯಕ್ತಿಗಳಿಗೆ ಉತ್ತಮ ಆಹಾರ ನೀಡಿ ಅವರಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿಗಳಾದ ಐಶ್ವರ್ಯ, ತಹಶೀಲ್ದಾರ್ ಚಂದ್ರಶೇಖರ್ ಶಂಗಾಲಿ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳು ಮಂಡ್ಯ ಮತ್ತಿತರರು ಇದ್ದರು.