ಸಿಂಧನೂರಿನ ಶ್ರೀ ಅಕ್ಷಯ ಆಹಾರ ಜೋಳಿಗೆ ಸೇವಾ ಟ್ರಸ್ಟ್ ನವರು ಮೊದಲನೇ ವಾರ್ಷಿಕೋತ್ಸವ ಆಚರಣೆಯ ಅಂಗವಾಗಿ ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಹಸಿವಿನಿಂದ ತೊಂದರೆ ಅನುಭವಿಸುತ್ತಿರುವ ಸರ್ಕಾರಿ ಆಸ್ಪತ್ರೆಯಲ್ಲಿನ 100 ರೋಗಿಗಳಿಗೆ ಆಹಾರವನ್ನು ತಯಾರಿಸಿ ಊಟದ ಪೋಟ್ಟಣಗಳನ್ನು ದಾನಿಗಳ ಸಹಕಾರದೊಂದಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಶ್ರೀ ಅಕ್ಷಯ ಆಹಾರ ಜೋಳಿಗೆ ಸೇವಾ ಟ್ರಸ್ಟ್ ಕಾರ್ಯದರ್ಶಿ ಅಶೋಕ್ ನಲ್ಲ, ಹಿರಿಯ ಸದಸ್ಯರಾದ ಭಾಸ್ಕರರಾವ್, ಖಾಜಾ ಹುಸೇನ್ ಸೇರಿದಂತೆ ಸರ್ವ ಸದಸ್ಯರಿದ್ದರು.
ವರದಿ:ಅವಿನಾಶ ದೇಶಪಾಂಡೆ