ರಾಯಚೂರು ಜಿಲ್ಲೆಯಲ್ಲಿ ಕೋವಿಡ್ -19 ಸೋಂಕನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಇದೇ ಮೇ.16ರ ಭಾನುವಾರ, 17ರ ಸೋಮವಾರ ಹಾಗೂ 18ರ ಮಂಗಳವಾರದಂದು ಸಂಪೂರ್ಣವಾಗಿ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ಸಿಂಧನೂರು ನಗರದ ರಸ್ತೆಗಳಲ್ಲಿ ವಾಹನ ಸಂಚಾರವಿಲ್ಲದೆ, ಮುಖ್ಯರಸ್ತೆಗಳು ಖಾಲಿ ಖಾಲಿಯಾಗಿದ್ದವು.
ಈ ಅವಧಿಯಲ್ಲಿ ಆಸ್ಪತ್ರೆಗಳು, ಮೆಡಿಕಲ್ ಶಾಪ್ಗಳು, ಪೆಟ್ರೋಲ್ ಪಂಪ್ ಗಳನ್ನು ಹೊರತುಪಡಿಸಿ, ಯಾವುದೇ ವ್ಯಾಪಾರ ವಹಿವಾಟುಗಳಿಗೆ ಅವಕಾಶವಿಲ್ಲದ ಕಾರಣ ಸಾರ್ವಜನಿಕರು ಹೊರಬರದೆ ಲಾಕ್ ಡೌನ್ ಗೆ ಸ್ಪಂದನೆ ಮಾಡುತ್ತಿದ್ದಾರೆ.
ವರದಿ: ಅವಿನಾಶ ದೇಶಪಾಂಡೆ