ಕೋವಿಡ್-19;ಆರೋಗ್ಯ ವೃದ್ಧಿಗೆ ಯೋಗ ಅತ್ಯವಶ್ಯಕ: ಡಾ.ಕೆ.ಸಿ ನಾರಾಯಣಗೌಡ

0
107

ಮಂಡ್ಯ – ದೇಶದ ಎಲ್ಲೆಡೆ ಹರಡಿರುವ ಮಹಾಮಾರಿ ಕರೋನ ಓಡಿಸುವ ಕಠಿಣ ಸಂದರ್ಭದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದ್ದು, ಇದರಿಂದ ಆರೋಗ್ಯವೃದ್ಧಿಯಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ .ಕೆ.ಸಿ ನಾರಾಯಣಗೌಡ ಹೇಳಿದರು.
ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶ ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಹಾಗೂ ತುಮಕೂರು ಹಾಗೂ ಮೈಸೂರಿನ ಶ್ರೀ ಪತಂಜಲಿ ಯೋಗ ಅಧ್ಯಯನ ಮತ್ತು ಸಂಶೋಧನ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕೋವಿಡ್-19 ನಿರ್ವಹಣೆಗಾಗಿ ಉಚಿತ ಆನ್‍ಲೈನ್ ಯೋಗ ತರಗತಿಗಳ ಕಾರ್ಯಕ್ರಮವನ್ನು ಜೂಮ್ ವಿಡಿಯೋ ಸಂವಾದದ ಮೂಲಕ ವರ್ಚುವಲ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ವತಿಯಿಂದ ನಮ್ಮ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉಚಿತ ಯೋಗ ತರಗತಿ ಕಾರ್ಯಕ್ರಮವನ್ನು ಆರಂಭಿಸುತ್ತಿರುವುದು ಖುಷಿ ತಂದಿದೆ ಎಂದರು.
ಯೋಗದ ಮುಖಾಂತರ ಈ ಕರೋನವನ್ನು ಹೊಡೆದು ಓಡಿಸಬಹುದಾಗಿದ್ದು ನಮ್ಮ ಕುಟುಂಬದ ಹಿರಿಯ ಕಿರಿಯರೆಲ್ಲರ ಆರೋಗ್ಯವನ್ನು ವೃದ್ಧಿಸಿ ಅವರಲ್ಲಿ ಶಕ್ತಿ ತುಂಬುವಲ್ಲಿ ಯೋಗ ಮಹತ್ವದ ಪಾತ್ರ ವಹಿಸಿದೆ ಎಂದರು.
ಪಾರಂಪರಿಕ ಇತಿಹಾಸವನ್ನು ಹೊಂದಿರುವ ಯೋಗವನ್ನು ನಾವೆಲ್ಲರೂ ಮರೆತಿದ್ದೇವೆ ಆದರೆ ಪ್ರಸ್ತುತದ ಕಠಿಣ ಸಂದರ್ಭದಲ್ಲಿ ಹಿಂದಿನ ಕಾಲದಂತೆಯೇ ಬೆಳಿಗ್ಗೆ ಹಾಗೂ ಸಂಜೆ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕು ಎಂದರು.
ಕರೋನಾ ಲಾಕ್ಡೌನ್ ಸಂದರ್ಭದಲ್ಲಿ ಹೊರಗೆ ತಿರುಗಾಡುವ ಬದಲು ಮನೆಯಲ್ಲಿ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು ಹಾಗೂ ಈ ಉಚಿತ ಯೋಗ ತರಗತಿಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.
ವಿಡಿಯೋ ಸಂವಾದದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಉಪಕುಲಪತಿಗಳಾದ ಪೆÇ್ರ.ಕೆ.ಇ ದೇವನಾಥನ್ , ಭಾರತ ಸರ್ಕಾರದ ಎನ್ .ಎಸ್.ಎಸ್ ಪ್ರಾದೇಶಿಕ ನಿರ್ದೇಶಕರಾದ ಖಾದ್ರಿ ನರಸಿಂಹಯ್ಯ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here