ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡದಿರಿ

0
179

ಧಾರವಾಡ.ಮೇ: 22: ಹುಬ್ಬಳ್ಳಿ ನಗರದ ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ದಾಸ್ತಾನು ಪರಿಶೀಲಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡಬಾರದು ಎಂದು ಜಂಟಿ ಕೃಷಿ ನಿರ್ದೇಶಕರು ಹಾಗೂ ಉಪ ಕೃಷಿ ನಿರ್ದೇಶಕರು ಸೂಚಿಸಿದರು.

ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದು ಕಂಡುಬಂದಲ್ಲಿ ಅಂತಹ ಮಳಿಗೆಗಳ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು. ಕಡ್ಡಾಯವಾಗಿ ಮಳಿಗೆಗಳಲ್ಲಿ ಕೃಷಿ ಪರಿಕರಗಳ ದರಪಟ್ಟಿಯನ್ನು ಪ್ರದರ್ಶಿಸ ಬೇಕು ಎಂದು ಸೂಚಿಸಿದರು.

ಮುಂಗಾರು ಬಿತ್ತನೆ ಕಾರ್ಯ ಆರಂಭವಾಗಿದ್ದು ರೈತರ ಅಗತ್ಯಕ್ಕೆ ತಕ್ಕಂತೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ದಾಸ್ತಾನನ್ನು ಸಂಗ್ರಹ ಮಾಡಲು ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು. ರೈತರು ಕೃಷಿ ಪರಿಕರಗಳನ್ನು ಖರೀದಿಸುವ ಸಂದರ್ಭದಲ್ಲಿ ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here