ಆಯುಷ್ ಇಲಾಖೆಯಿಂದ ಮಾಧ್ಯಮ ಪ್ರತಿನಿಧಿಗಳಿಗೆ ರೋಗನಿರೋಧಕ ಶಕ್ತಿ ವೃದ್ಧಿಸುವ ಆರೋಗ್ಯ ಕಿಟ್ ವಿತರಣೆ

0
125

ಬಳ್ಳಾರಿ,ಜೂ.02 : ಕೋವಿಡ್ ಫ್ರಂಟ್ ಲೈನ್ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ಆಯುಷ್ ಇಲಾಖೆಯ ವತಿಯಿಂದ ರೋಗನಿರೋಧಕ ಶಕ್ತಿ ವೃದ್ಧಿಸುವ ಆರೋಗ್ಯ ಕಿಟ್‍ಗಳನ್ನು ಬುಧವಾರ ವಿತರಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಅವರ ಸಮ್ಮುಖದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ವರಪ್ರಸಾದರಾವ್ ಅವರು ರೋಗನಿರೋಧಕ ಶಕ್ತಿ ವೃದ್ಧಿಸುವ ಸಂಶಮನಿವಟಿ, ಆಯುಷ್ 64, ಆರ್ಸೆನಿಕ್ ಮಾತ್ರೆಗಳು, ಕಷಾಯ ಪುಡಿಗಳನ್ನು ಆಯುಷ್ ಇಲಾಖೆಯಿಂದ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ವರಪ್ರಸಾದರಾವ್ ಅವರು ರೋಗನಿರೋಧಕ ಶಕ್ತಿ ವೃದ್ಧಿಸುವ ವೈದ್ಯಕೀಯ ಕಿಟ್ ಗಳನ್ನು ಕೊರೊನಾ ವಾರಿಯರ್ಸ್ ಗಳಾದ ಮಾಧ್ಯಮ ಪ್ರತಿನಿಧಿಗಳಿಗೆ ಸೇರಿದಂತೆ ವಿವಿಧ ಇಲಾಖೆಗಳ ಕೊರೊನಾ ವಾರಿಯರ್ಸ್ ಗಳಿಗೆ ವಿತರಿಸಲಾಗುತ್ತಿದೆ. ಶೀಘ್ರದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ವಿತರಿಸಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಆಯುಷ್ ಇಲಾಖೆಯ ಸಹಾಯಕ ಆಡಳಿತ ಅಧಿಕಾರಿ ಶರಣಬಸಪ್ಪ ಜಿನಗಾ,ಆಯುಷ್ ವೈದ್ಯರಾದ ಡಾ.ಮಾಧುರಿದೇವಿ,ಭಾರತಿ ಮತ್ತು ಇಲಾಖೆಯ ಇತರರು ಹಾಗೂ ಮಾಧ್ಯಮ ಪ್ರತಿನಿಧಿಗಳು ಇದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಾಮಾನ್ಯ ಚಿಕಿತ್ಸೆಗೆ ಸಂಬಂಧಿಸಿದ ಕಿಟ್ ಕೂಡ ವಿತರಿಸಲಾಯಿತು.

LEAVE A REPLY

Please enter your comment!
Please enter your name here