ಮಂಡ್ಯ.- ಕೋವಿಡ್ ಕೇರ್ ಕೇಂದ್ರ ಒಕ್ಕಲಿಗರ ಭವನದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ನೆಟ್ಟರು ಹಾಗೂ ವಿಶೇಷವಾಗಿ ಕೋವಿಡ್ ಪೀಡಿತರಿಗೆ ಆತ್ಮಸ್ಥೈರ್ಯ ತುಂಬಲು ಸೋಂಕಿತ ವ್ಯಕ್ತಿಗಳಿಂದ ಸಹ ಗಿಡಗಳನ್ನು ಜಿಲ್ಲಾಧಿಕಾರಿ ಎಸ್ .ಅಶ್ವಥಿ ಹಾಕಿಸಿದರು.
ನಂತರ ಕೋವಿಡ್ ಕೇರ್ ಕೇಂದ್ರಕ್ಕೆ ತೆರಳಿ ಅಲ್ಲಿನ ವ್ಯವಸ್ಥೆಯ ಬಗ್ಗೆ ಖುದ್ದು ಪರಿಶೀಲಿಸಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿಗಳಾದ ಐಶ್ವರ್ಯ ಮತ್ತು ಪೆÇ್ರಬೇಷನರಿ ಐಎಎಸ್ ಅಧಿಕಾರಿ ಲಾವಿಸ್, ವೈದ್ಯಾಧಿಕಾರಿಗಳು ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.