AIDSO ನಿಂದ ಅಖಿಲ ಭಾರತ ಪ್ರತಿಭಟನಾ ದಿನ.!!

0
82

ವರದಿ:ಮಹೇಶ್

ಬಳ್ಳಾರಿ. ಜೂ.09.AIDSO ವಿದ್ಯಾರ್ಥಿ ಸಂಘಟನೆ ವತಿಯಿಂದ ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ಕೋವಿಡ್-19 ವಾರಿಯರ್ಸ್ ಗಳ ಮೇಲಿನ ದಾಳಿಯ ವಿರುದ್ಧ ಹಾಗೂ ಬಾಬಾ ರಾಮದೇವ್ ಅವರ ಅವೈಜ್ಞಾನಿಕ ಮತ್ತು ಮೂಢನಂಬಿಕೆ ಹೇಳಿಕೆಗಳನ್ನು ಖಂಡಿಸಿ AIDSO ದಿಂದ ಅಖಿಲ ಭಾರತ ಪ್ರತಿಭಟನಾ ದಿನ!

ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ಇತ್ತೀಚಿನ ದಿನಗಳಲ್ಲಿ ಕೋವಿಡ್ ಯೋಧರ ಮೇಲೆ ನಡೆದ ಹಲ್ಲೆ ಮತ್ತು ರಾಮ್‌ದೇವ್ ಅವರ ಅವೈಜ್ಞಾನಿಕ, ಮೂಢನಂಬಿಕೆ ಮತ್ತು ಸುಳ್ಳು ಹೇಳಿಕೆಗಳನ್ನು ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ರಾಜ್ಯ ಕಾರ್ಯದರ್ಶಿಗಳಾದ ಅಜಯ್ ಕಾಮತ್ ಅವರು‌ ಖಂಡಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಸರ್ಕಾರದ ಸಹಕಾರವು ಅನೇಕ ಅವೈಜ್ಞಾನಿಕ ಔಷಧಿ ಮತ್ತು ಕೋವಿಡ್-19 ಚಿಕಿತ್ಸೆಯ ಕುರಿತು ಪ್ರಸಾರ ಮಾಡಲು ಕಾರಣವಾಗಿದೆ. ಕೋವಿಡ್ ಯೋಧರು ಹಗಲು ರಾತ್ರಿಯನ್ನದೇ, ದಣಿವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಪ್ರಸ್ತುತ ಕಷ್ಟಕರ ಸಾಂಕ್ರಾಮಿಕ ಕಾಲದಲ್ಲಿ ಇಂತಹ ಅವೈಜ್ಞಾನಿಕ ಹೇಳಿಕೆಗಳು ಆಧುನಿಕ ಔಷಧಿ ವೈದ್ಯರ ಬಗ್ಗೆ ಅವಹೇಳನಕಾರಿಯಲ್ಲದೇ ಬೇರೆನೂ ಅಲ್ಲ. ಕೋವಿಡ್-19 ನ ವೈಜ್ಞಾನಿಕ ಚಿಕಿತ್ಸೆಗೆ ಇಂತಹ ಬೆಳವಣಿಗೆಗಳು ಹಾನಿಕಾರಕ. ಸಾಮಾನ್ಯ ಪ್ರಜ್ಞೆ ಇರುವ ಜನರು ಮತ್ತು ಆರೋಗ್ಯ ಕಾರ್ಯಕರ್ತರು ಇಂತಹ ಬೆಳವಣಿಗೆಗಳ ಬಗ್ಗೆ ಚಿಂತಿತರಾಗಿದ್ದಾರೆ.

ರಾಮ್‌ದೇವ್ ಅವರ ಹಿಂದೆ ಸರ್ಕಾರವೇ ಪರೋಕ್ಷವಾಗಿ ಬೆಂಬಲಕ್ಕೆ ನಿಂತಿದೆ ಮತ್ತು ಆದ್ದರಿಂದಲೇ ಅವರ ವಿರುದ್ಧ ಈವರೆಗೆ ಯಾವುದೇ ಕಠಿಣ ಕ್ರಮಗಳನ್ನು ಕೈಗೊಂಡಿಲ್ಲ. ಇದರ ಫಲವಾಗಿ, ರಾಮದೇವ್ ಅವರ ದುರಹಂಕಾರವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, “ಸರ್ಕಾರ ಅಲ್ಲ ಅವರಪ್ಪನಿಂದಲೂ ರಾಮದೇವ್ ನನ್ನು ಬಂಧಿಸಲು ಸಾಧ್ಯವಿಲ್ಲ” ಎಂದು ರಾಮದೇವ್ ಪ್ರತಿಕ್ರಿಯಿಸಿದ್ದಾರೆ.

ಇದರೊಂದಿಗೆ ಇತ್ತೀಚಿನ ದಿನಗಳಲ್ಲಿ ಅಸ್ಸಾಂ, ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿಯೂ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮತ್ತು ಕಿರುಕುಳ ನಡೆಸಲಾಗುತ್ತಿದೆ. ಆಧುನಿಕ ಔಷಧಿ ಮತ್ತು ವೈದ್ಯಕೀಯ ವೈದ್ಯರ ವಿರುದ್ಧ ನಿರಂತರ ಸುಳ್ಳು ಮತ್ತು ಅವಹೇಳನಕಾರಿ ಹೇಳಿಕೆಗಳು ಮತ್ತು ಅಪಪ್ರಚಾರವು ಆರೋಗ್ಯ ಸಿಬ್ಬಂದಿಗೆ ಕೆಲಸ ಮಾಡಲು ಪ್ರತಿಕೂಲ ವಾತಾವರಣವನ್ನು ಸೃಷ್ಟಿಸುತ್ತಿದೆ.

ಈ ಹಿನ್ನೆಲೆಯಲ್ಲಿ ದಾಳಿಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಭದ್ರತೆಯನ್ನು ಸರ್ಕಾರ ಖಾತ್ರಿಪಡಿಸಬೇಕು. ಇದಲ್ಲದೇ, ಎಲ್ಲಾ ಹಂತದಲ್ಲೂ ಆರೋಗ್ಯ ಸೌಲಭ್ಯಗಳ ಮೂಲಸೌಕರ್ಯವನ್ನು ಸಮರ್ಪಕವಾಗಿ ಸುಧಾರಿಸಬೇಕು. ರಾಮ್‌ದೇವ್ ಅವರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಂಡು, ಕೋವಿಡ್ ಯೋಧರಿಗೆ ಸೂಕ್ತ ಭದ್ರತೆಯನ್ನು ಖಾತ್ರಿಪಡಿಸಬೇಕು ಎಂದು ಒತ್ತಾಯಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯು 2021ರ ಜೂನ್ 9 ರಂದು ಅಖಿಲ ಭಾರತ ಪ್ರತಿಭಟನಾ ದಿನಕ್ಕೆ ಕರೆ ನೀಡಿತ್ತು. ಹಾಗೆಯೇ ಈ ಮೇಲಿನ ವಿಷಯಗಳ ವಿರುದ್ಧ ಪ್ರಧಾನ ಮಂತ್ರಿ ಅವರಿಗೆ ಆನ್‌ಲೈನ್ ಮೂಲಕ ಸಹಿ ಸಂಗ್ರಹ ಅರ್ಜಿ ಸಲ್ಲಿಸಲು ಎಐಡಿಎಸ್ಓ ತೀರ್ಮಾನಿಸಿದೆ. ಪ್ರತಿಭಟನಾ ದಿನಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೇಶದಾದ್ಯಂತ ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ರಾಜ್ಯದ ನೂರಾರು ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರು ಹಾಗೂ ವಿದ್ಯಾರ್ಥಿ ಸಮುದಾಯ ಸಕ್ರಿಯವಾಗಿ ಹೋರಾಟದಲ್ಲಿ ಭಾಗಿಯಾದರು ಎಂದು AIDSO ಜಿಲ್ಲಾ ಅಧ್ಯಕ್ಷರಾದ ಗುರಳ್ಳಿ ರಾಜ, ಜಿಲ್ಲಾ ಕಾರ್ಯದರ್ಶಿ ರವಿಕಿರಣ್ ಜೆ.ಪಿ. ಕೆ. ಈರಣ್ಣ ಜಿಲ್ಲಾ ಸೆಕ್ರೆಟರಿಯಾಟ್ ಸದಸ್ಯರು ಬಳ್ಳಾರಿ ಹೇಳಿದರು.

LEAVE A REPLY

Please enter your comment!
Please enter your name here