ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಗಂಭೀರ ಗಾಯಗೊಂಡು, ಇನ್ನೊಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಕಡಬದಲ್ಲಿ ನಡೆದಿದೆ. ಉಪ್ಪಿನಂಗಡಿ ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಸಮೀಪದ ಕುಂಡಾಜೆ ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರ ಗಾಯಗೊಂಡು, ಇನ್ನೊಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಶುಕ್ರವಾರ ನಡೆದಿದೆ.ಗಂಭೀರವಾಗಿ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಪ್ಪಿನಂಗಡಿ ಮೂಲದವರನ್ನು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಗಣರಾಜ್ ಕುಂಬ್ಳೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.ಆಲಂಕಾರು ಭಾಗದಿಂದ ಬರುತ್ತಿದ್ದ ಕಾರಿಗೆ ಉಪ್ಪಿನಂಗಡಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಕುಂಡಾಜೆ ಸೇತುವೆಯಲ್ಲಿ ಡಿಕ್ಕಿ ಹೊಡೆದಿದೆ. ಎರಡೂ ಕಾರುಗಳು ನಜ್ಜುಗುಜ್ಜಾಗಿದ್ದು, ಡಿಕ್ಕಿಯ ರಭಸಕ್ಕೆ ಒಂದು ಕಾರು ವಿರುದ್ಧ ದಿಕ್ಕಿಗೆ ನಿಂತಿದೆ.