ಸಂಡೂರು. ಜುಲೈ.22.ದಿನಾಂಕ.21.07.2021ರಂದು,ಬುಧವಾರ, ಇಳಿಸಂಜೆ 4.00 ಗಂಟೆಗೆ ಕುಡಿತಿನಿಯ ಛಲವಾದಿ ಕಾಲೋನಿಯಲ್ಲಿ ನಾಡೋಜ ಪ್ರೊ.ಸಿದ್ದಲಿಂಗಯ್ಯ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಬಳ್ಳಾರಿಯ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಎಸ್.ಕುಮಾರ್
ಆರ್.ಪಿ.ಐ. ಕರ್ನಾಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಡಾ.ಆರ್.ಈರಮ್ಮ,
ಕಾರಟಗಿಯ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಸಿ.ಬಸವರಾಜು ಅವರು ನುಡಿನಮನ ಸಲ್ಲಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಬೈಲೂರು ಮಲ್ಲಿಕಾರ್ಜುನ, ಸಮಸಮಾಜ ನಿರ್ಮಾಣ ಸಂಸ್ಥೆಯ ಕಾರ್ಯದರ್ಶಿ ಸಿ.ಬಸವರಾಜು, ಸಮಸಮಾಜ ನಿರ್ಮಾಣ ಸಂಸ್ಥೆಯ ಉಪಾಧ್ಯಕ್ಷ ಜಿ.ಉಲ್ಲಾಸ್, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕುಡಿತಿನಿ ಅಧ್ಯಕ್ಷ ಸಿ.ಆಂಜನೇಯ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರಾದ ಹೊನ್ನುಪೀರ್ ಭಾಷಾ, ಶರಣಬಸವ, ಕುರುಗೋಡು ತಾಲ್ಲೂಕು ಅಧ್ಯಕ್ಷ ಬಿ.ನಾಗೇಂದ್ರ, ಹಾಗೂ ಊರಿನ ಪ್ರಮುಖರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಶಿವಕುಮಾರ್ ಗಂಗಪ್ಪ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜವಾಬ್ಧಾರಿ ಆದೇಶಗಳನ್ನು ನೀಡಲಾಯಿತು.
ಸಿ.ಆಂಜನೇಯ ಪ್ರಾಸ್ತಾವಿಕ ಮಾತನಾಡಿದರು.
ರಾಮು ಮತ್ತು ಗಿರೀಶ್ ಕಾರ್ಯಕ್ರಮ ನಿರೂಪಣೆ ಮಾಡಿದರು.