ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವೆ. ವಿಧಾನಸೌಧದಿಂದ ನೇರವಾಗಿ ತೆರಳಿ ರಾಜೀನಾಮೆ ನೀಡುತ್ತೇನೆ ಎಂದು ಬಿಎಸ್ವೈ ಹೇಳಿದ್ದಾರೆ. ರಾಜೀನಾಮೆ ನೀಡುದಾಗಿ ಘೋಷಿಸುವ ವೇಳೆ ಯಡಿಯೂರಪ್ಪ ಭಾವುಕರಾಗಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸುತ್ತೇನೆ ಎಂದು ತಿಳಿಸಿದ ಅವರು, ದುಃಖದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿಲ್ಲ. ಸಂತೋಷದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವೆ ಎಂದು ಹೇಳಿದ್ದಾರೆ.
ಸಂತೋಷದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಭಾವುಕರಾಗಿ ಹೇಳಿದ ಬಿಎಸ್ವೈ, ಸಿಎಂ ಆಗಿ ಅಧಿಕಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. 75 ವರ್ಷ ದಾಟಿದ ನನಗೆ ಸಿಎಂ ಸ್ಥಾನವನ್ನು ನೀಡಿದ್ದರು. 2 ವರ್ಷ ಆಡಳಿತ ನಡೆಸಲು ಅವಕಾಶವನ್ನು ನೀಡಿದ್ದರು. ಕೇವಲ ಶಬ್ದಗಳಲ್ಲೇ ಅಭಿನಂದನೆ ಸಲ್ಲಿಸುವುದಕ್ಕೆ ಆಗಲ್ಲ ಎಂದು ಅಭಿಪ್ರಾಯಪಟ್ಟರಿ.
ರಾಜೀನಾಮೆ ನೀಡಲು ಯಡಿಯೂರಪ್ಪ ವಿಧಾನಸೌಧದಿಂದ ರಾಜಭವನಕ್ಕೆ 1.3 ಕಿ.ಮೀ ನಡೆದುಕೊಂಡು ಬರಲಿದ್ದಾರೆ. ಹೆಜ್ಜೆ ಹೆಜ್ಜೆಗೂ ಪೊಲೀಸ್ ಭದ್ರತೆ ನೀಡಲಾಗುತ್ತದೆ.