ಚಾಮರಾಜನಗರದ ಬಿಳಿಗಿರಿ ರಂಗನಾಥ ದೇವಾಲಯ ಹುಲಿ ರಕ್ಷಿತಾರಣ್ಯದಲ್ಲಿ ಐವರು ಕಳ್ಳ ಬೇಟೆಗಾರರ ಬಂಧನ

0
337

ಬಿಳಿಗಿರಿ ರಂಗನಾಥ ದೇವಾಲಯ ಹುಲಿ ರಕ್ಷಿತಾರಣ್ಯದಲ್ಲಿ ಗುರುವಾರ ಅರಣ್ಯ ಇಲಾಖೆ ಅಧಿಕಾರಿಗಳು ಐವರನ್ನು ಬಂಧಿಸಿ, ಬೇಟೆಗೆ ಬಳಿಸಿದ್ದ ಬಂದೂಕು ಮತ್ತು ಇತರ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಗೋವಿಂದರಾಜು(29) ಮತ್ತು ಬೆಂಗಳೂರಿನ ಮಲ್ಲೇಶ್ವರಂನ ಪ್ರಮೋದ್ (27) ಎಂದು ಗುರುತಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರಲ್ಲಿ ಮೂವರು ಕೊಡಗು ಜಿಲ್ಲೆಯ ಸೋಮವಾರ ಪೇಟೆ ಮೂಲದವರಾಗಿದ್ದರೆ, ಒಬ್ಬರು ಚಾಮರಾಜನಗರ ತಾಲ್ಲೂಕಿನ ಬಡಗಲಪುರ ಮತ್ತು ಇಬ್ಬರು ಬೆಂಗಳೂರಿನ ಮಲ್ಲೇಶ್ವರಂ ಮೂಲದವರಾಗಿದ್ದಾರೆ.

ಬಂಧಿತರಿಂದ ಎರಡು ಬಂದೂಕುಗಳು(ಈ ಪೈಕಿ ಒಂದಕ್ಕೆ ಪರವಾನಿಗೆ ಇಲ್ಲ), ಆರು ಜೀವಂತ ಕಾರ್ಟಿಜ್ ಗಳು, ಒಂದು ಚಾಕು, ಬ್ಯಾಟರಿ ದೀಪಗಳು ಮತ್ತು ಇತರ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ವಡ್ಗಲಪುರ ಬಳಿಯ ಚಾಮರಾಜನಗರಕ್ಕೆ ತೆರಳುತ್ತಿದ್ದ ಕಾರನ್ನು ತಡೆದು ಈ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅರಣ್ಯ ಉಪ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here