ಹೂಡೇಂ ಗ್ರಾಮದಲ್ಲಿ ವಾಲ್ಮೀಕಿ ಪ್ರತಿಮೆಗೆ ಕಾಂಗ್ರೇಸ್ ಮುಖಂಡ ರಘು ಗುಜ್ಜಲ್ ಮಾಲಾರ್ಪಣೆ

0
124

ವಿಜಯನಗರ: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 2018 ರ ಅಭ್ಯರ್ಥಿ ಹಾಗೂ ರಾಷ್ಟ್ರೀಯ ಕಾರ್ಯಕರಣಿ ಸದಸ್ಯರು (ಎಸ್ ಟಿ,ವಿಭಾಗ,ಎಐಸಿಸಿ) ಮಾಜಿ ಕಾರ್ಯದರ್ಶಿಗಳು, ಕೆಪಿಸಿಸಿ ರಘು ಗುಜ್ಜಲ್ ಅವರು ಹೂಡೇಂ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಭೇಟಿ ನೀಡಿ ವಾಲ್ಮೀಕಿ ಸರ್ಕಲ್ ಬಳಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು

ನಂತರ ಗ್ರಾಮದ ಕಾರ್ಯಕರ್ತರ ಜೊತೆ ಸಮಾಲೋಚಿಸಿ ಗ್ರಾಮದ ಅಭಿವೃದ್ಧಿಗಾಗಿ ಮತ್ತು ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯತಿ ಪೂರ್ವ ತಯಾರಿ ಬಗ್ಗೆ ಚರ್ಚಿಸಿದರು.

ಚುನಾವಣೆಗಳಲ್ಲಿ ಪಕ್ಷ ಹಾಗೂ ಕಾರ್ಯಕರ್ತರು ಲಿ ತಳಮಟ್ಟದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದಾರೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಸದುದ್ದೇಶದಿಂದ ಹೂಡೇಂ ಜಿಲ್ಲಾ ಪಂಚಾಯತಿ ಕ್ಷೇತ್ರದ ವ್ಯಾಪ್ತಿಗೆ ಬರುವ ಹಳ್ಳಿಗಳ ಕುಂದುಕೊರತೆಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಸೈಯದ್ ಶುಕೂರ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಜಿ. ನೇತ್ರಮ್ಮ ಓಬಣ್ಣ, ಹಾಗೂ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಸತೀಶ್, ಯುವ ಕಾಂಗ್ರೆಸ್ ಮುಖಂಡರಾದ ಸೂರ್ಯಪ್ರಕಾಶ್, ಸೆರಿದಂತೆ ಎಲ್ಲಾ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ:-ಮಂಜುನಾಥ್

LEAVE A REPLY

Please enter your comment!
Please enter your name here