ವನಸಿರಿ ಅಮರೇಗೌಡ ಮಲ್ಲಾಪೂರ ಅವರ ಹುಟ್ಟು ಹಬ್ಬ ಆಚರಣೆ:ರಕ್ತದಾನ ಶಿಬಿರ ಯಶಸ್ವಿ

0
143

ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ರವಿವಾರ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರ ಹುಟ್ಟು ಹಬ್ಬದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ, ಸಸಿಗಳ ನೆಡುವ ಕಾರ್ಯ, ವನಸಿರಿ ಆಡಿಯೋ ರಿಲೀಸ್, ಜೀವ ರಕ್ಷಕ ಸೇವಾ ಟ್ರಸ್ಟ್ ಉದ್ಘಾಟನೆ, ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ರೌಡಕುಂದ ಸಂಸ್ಥಾನ ಹೀರೇಮಠದ ಶಿವಯೋಗಿ ದೇವರು ಮಾತನಾಡಿ ಪರಿಸರ ರಕ್ಷಣೆ, ರಕ್ತದಾನದಂತಹ ಸೇವಾ ಕಾರ್ಯಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದರು.

ಮುಖ್ಯ ಅತಿಥಿಗಳಾದ ಜೆಡಿಎಸ್ ವಕ್ತಾರ ಬಸವರಾಜ ನಾಡಗೌಡ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ ಕರಿಯಪ್ಪ, ಜಿ.ಪಂ.ಮಾಜಿ ಸದಸ್ಯ ಶಿವನಗೌಡ ಗೊರೇಬಾಳ, ಹಿರಿಯ ನ್ಯಾಯವಾದಿ ಎಂ. ಅಮರೇಗೌಡ ವಕೀಲರು ಮಾತನಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸೋಮನಗೌಡ ಬಾದರ್ಲಿ, ಈರೇಶ ಇಲ್ಲೂರು, ರಂಗನಗೌಡ ಗೊರೇಬಾಳ, ವನಸಿರಿ ಫೌಂಡೇಶನ್ ಗೌರವಾಧ್ಯಕ್ಷ ಶಂಕರಗೌಡ ಎಲೆಕೂಡ್ಲಿಗಿ, ಸೇರಿದಂತೆ ಹಲವರು ವೇದಿಕೆ ಮೇಲಿದ್ದರು.

ವರದಿ:ಅವಿನಾಶ ದೇಶಪಾಂಡೆ

LEAVE A REPLY

Please enter your comment!
Please enter your name here