ಬಳ್ಳಾರಿ,ಆ.13 : 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ ಕಾಲ್ನಡಿಗೆ ಜಾಥಾಗೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ವಿವಿಯ ಕುಲಪತಿ ಪ್ರೊ.ಸಿದ್ದು ಪಿ. ಆಲಗೂರ ಅವರು ಶುಕ್ರವಾರ ಚಾಲನೆ ನೀಡಿದರು.
ಭಾರತ ದೇಶಕ್ಕೆ ಸ್ವಾತಂತ್ರ್ಯ ನೀಡುವಲ್ಲಿ ತ್ಯಾಗ, ಬಲಿದಾನವನ್ನು ಅರ್ಪಿಸಿದಂತಹ ಮಹನೀಯರನ್ನು ನೆನೆದು ಅವರ ಭಾವಚಿತ್ರಗಳನ್ನು ಹಿಡಿದು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಮುಂಭಾಗದಿAದ ಪ್ರಾರಂಭವಾಗಿ ಆಡಳಿತ ಭವನದ ಸುತ್ತ ಕಾಲ್ನಡಿಗೆಯಲ್ಲಿ ನಡೆದು ಆಡಳಿತ ಭವನದ ಮುಂಭಾಗದಲ್ಲಿ ಜಾಥಾ ಮುಕ್ತಾಯಗೊಳಿಸಲಾಯಿತು.
ಜಾಥಾದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎಸ್.ಸಿ.ಪಾಟೀಲ, ಮೌಲ್ಯಮಾಪನದ ಕುಲಸಚಿವ ಪ್ರೊ.ಶಶಿಕಾಂತ ಎಸ್.ಉಡಿಕೇರಿ ಮತ್ತು ಹಣಕಾಸು ಅಧಿಕಾರಿ ಡಾ.ಕೆ.ಸಿ. ಪ್ರಶಾಂತ ಭಾಗವಹಿಸಿದ್ದರು.
ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಅಮೃತ ಮಹೋತ್ಸವದ ನೋಡಲ್ ಅಧಿಕಾರಿ ಸಂಪತ ಕುಮಾರ ಜಾಥಾ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಇದ್ದರು.