ಬಳ್ಳಾರಿ,ಆ.21: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಾಲ್ಬಹುದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಬಾಗೀನ ಅರ್ಪಿಸಲು ಆಲಮಟ್ಟಿಗೆ ತೆರಳುವ ಮಾರ್ಗದಲ್ಲಿ ಬೆಂಗಳೂರಿನಿಂದ ತೋರಣಗಲ್ಲುವಿನ ಜಿಂದಾಲ್ ಏರ್ಸ್ಟ್ರೀಪ್ಗೆ ಶನಿವಾರ ಬೆಳಗ್ಗೆ ಬಂದಿಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಅರಣ್ಯ ಇಲಾಖೆ ಸಚಿವ ಉಮೇಶ ಕತ್ತಿ ಅವರಿಗೆ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಸ್ವಾಗತ ಕೋರಿದರು.
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ, ಬುಡಾ ಅಧ್ಯಕ್ಷ ಪಾಲನ್ನ, ಐಜಿಪಿ ಮನಿಷ್ ಖರ್ಬಿಕರ್, ಎಸ್ಪಿ ಸೈದುಲು ಅಡಾವತ್ ಮತ್ತಿತರರು ಇದ್ದರು.
ಸುಮಾರು ಅರ್ಧಗಂಟೆ ಜಿಂದಾಲ್ ಏರ್ಸ್ಟ್ರೀಪ್ನಲ್ಲಿ ಕಳೆದ ಸಿಎಂ ಬೊಮ್ಮಾಯಿ ಮತ್ತು ಸಚಿವರು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು,ಎಸ್ಪಿ ಹಾಗೂ ಶಾಸಕರೊಂದಿಗೆ ಕೆಲ ಹೊತ್ತು ಚರ್ಚಿಸಿದರು.
ನಂತರ ಅವರು ಹೆಲಿಕ್ಯಾಪ್ಟರ್ ಮೂಲಕ ಆಲಮಟ್ಟಿಗೆ ತೆರಳಿದರು.