ಕಲಬುರಗಿ.ಆ.23.–ಕೋವಿಡ್-19 ಹಿನ್ನೆಲೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ನಗರದ ಡಾ.ಎಸ್.ಎಂ. ಪಂಡಿತ ರಂಗ ಮಂದಿರದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸೋಮವಾರ ಸರಳವಾಗಿ ಆಚರಿಸಲಾಯಿತು.
ಆರ್ಯ ಈಡಿಗ ಸಮಾಜದ ಜಿಲ್ಲಾ ಅಧ್ಯಕ್ಷ ರಾಜೇಶ ಗುತ್ತೇದಾರ ಅವರು ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ತಹಶೀಲ್ದಾರ್ ಮಹಾಂತೇಶ ಮುಡಬಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಆರ್ಯ ಈಡಿಗ ಸಮಾಜದ ರಾಜ್ಯ ಪ್ರತಿನಿಧಿ ಹಣಮಯ್ಯ ಆಲೂರ, ಸಮಾಜದ ಜಯಂತಿ ಅಧ್ಯಕ್ಷ ಬಾಲರಾಜ ಗುತ್ತೇದಾರ, ಹಿಂದುಳಿದ ಜಾತಿಗಳ ಒಕ್ಕೂಟಗಳ ಜಿಲ್ಲಾಧ್ಯಕ್ಷ ಮಹಾಂತೇಶ ಕೌಲಗಿ, ಸಂಗೀತ ಕಲಾವಿದ ಬಸಯ್ಯ ಬಿ. ಗುತ್ತೇದಾರ, ನಿವೃತ್ತ ತಹಶೀಲ್ದಾರ್ ಅಂಬಲಯ್ಯಾ ಗುತ್ತೇದಾರ, ರುಕ್ಮಯ್ಯಾ ಗುತ್ತೇದಾರ ಇತರರು ಉಪಸ್ಥಿತರಿದ್ದರು.