ಮಂಡ್ಯ, ಸೆ 02 :- ಇಂದು ಮಂಡ್ಯ ತಾಲ್ಲೂಕಿನ ಹಾಲಹಳ್ಳಿ ಕೊಳಗೇರಿಗೆ ಭೇಟಿ ನೀಡಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಾಣವಾಗಿರುವ ಮನೆಗಳ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಸ್.ಅಶ್ವತಿ ಪರಿವೀಕ್ಷಣೆ ನಡೆಸಿದರು.
ಈ ಸಂದರ್ಭದಲ್ಲಿ ಮನೆಗಳಿಗೆ ಬೇಕಾದ ಸಮರ್ಪಕವಾದ ಕುಡಿಯುವ ನೀರು ಹಾಗೂ ಮೂಲ ಸೌಕರ್ಯಗಳು, ಯುಜಿಡಿ ವ್ಯವಸ್ಥೆ ಯನ್ನು ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ನಿರ್ಮಾಣ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಆಯುಕ್ತರಾದ ಎಸ್.ಲೋಕೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.