ಧಾರವಾಡ.ಸೆ.17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಕನ್ನಡ ಸಂಸ್ಕøತಿ ಇಲಾಖೆಯಿಂದ ಶ್ರೀ ವಿಶ್ವಕರ್ಮ ಅವರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಇಂದು (ಸೆ.17) ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ ಅವರು ಶ್ರೀ ವಿಶ್ವಕರ್ಮರ ಭಾವಚಿತ್ರಕ್ಕೆ ಪುಪ್ಪಾರ್ಚಣೆ ಮಾಡಿ, ಗೌರವ ಸಮರ್ಪಿಸಿದರು.
ಈ ಸಂಧರ್ಬದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ನಿವೃತ್ತ ಜಿಲ್ಲಾ ವಾರ್ತಾ ಅಧಿಕಾರಿ ಸಿ.ಪಿ.ಮಾಯಾಚಾರಿ, ಸಮಾಜದ ಮುಖಂಡರುಗಳಾದ ಶಿವಣ್ಣ ಬಡಿಗೇರ, ವಸಂತ ಅರ್ಕಾಚಾರಿ,, ಕಾಳಪ್ಪ ಬಡಿಗೇರ, ಮೋಹನ ಅರಕಸಾಲಿ, ಬಾಸ್ಕರ್ ಬಡಿಗೇರ, ಮಾನಪ್ಪ ಬಡಿಗೇರ, ನಿರಂಜನ ಬಡಿಗೇರ, ಎಸ್.ಕೆ.ಪತ್ತಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು