ಬಳ್ಳಾರಿ ಸೆ.17 : ಸಿರುಗುಪ್ಪ ತಾಲೂಕಿನ ರಾವಿಹಾಳ ಗ್ರಾಮದಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ರಾವಿಹಾಳ ಗ್ರಾಪಂ ಸದಸ್ಯರಾದ ಆರ್.ಟಿ. ಮಾದಣ್ಣ ಅವರು ಶುಕ್ರವಾರ ಚಾಲನೆ ನೀಡಿದರು.
ಚಾಲನೆ ನೀಡಿದ ನಂತರ ಅವರು ಮಾತನಾಡಿ ಗ್ರಾಮದ ಜನರು ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಿ ಕೊಳ್ಳಿ, ಗ್ರಾಪಂ ವತಿಯಿಂದ ಆಸ್ಪತ್ರೆ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತಿದ್ದು, ಎಲ್ಲರೂ ತಪ್ಪದೇ ಲಸಿಕೆ ಪಡೆದುಕೊಳ್ಳಿ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಅಂಬಿಕಾ ಸಿದ್ದನಗೌಡ, ಗ್ರಾಪಂ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಮತ್ತು ಊರಿನ ಮುಖಂಡರು ಇದ್ದರು.