ದಾವಣಗೆರೆ, ಅ.02: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಮಹಾತ್ಮ ಗಾಂಧಿ ಜಯಂತಿ ಪ್ರಭಾತ್ ಫೇರಿ ಆಚರಿಸುವ ಮೂಲಕ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ‘ಪ್ಯಾನ್ ಇಂಡಿಯಾ ಅವರ್ನೆಸ್ ಅಂಡ್ ಔಟ್ರೀಚ್’ ಕಾರ್ಯಕ್ರಮದ ಉದ್ಘಾಟನೆಯನ್ನು ಶನಿವಾರ ದಾವಣಗೆರೆಯ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.
ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಾನವ ಹಕ್ಕುಗಳ ವೇದಿಕೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಹಾತ್ಮ ಗಾಂಧಿ ಜಯಂತಿ ಪ್ರಭಾತ್ ಫೇರಿ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್ ಸೇರಿದಂತೆ ವಿವಿಧ ನ್ಯಾಯಾಧೀಶರು, ನ್ಯಾಯಾಲಯಗಳ ಸಿಬ್ಬಂದಿ ವರ್ಗದವರು ಹಾಗೂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.