ದಲಿತರ ಕೇರಿಗೆ ಸರ್ಕಾರ; ಕಂದಾಯ ಸಚಿವರಿಂದ ಅಹವಾಲು ಸ್ವೀಕಾರ.

0
88

ದಾವಣಗೆರೆ,ಅ.17 :ಕಂದಾಯ ಸಚಿವ ಆರ್.ಅಶೋಕ್ ಅವರು ಗ್ರಾಮವಾಸ್ತವ್ಯದ ಹಿನ್ನೆಲೆಯಲ್ಲಿ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ವಾಸ್ತವ್ಯ ಮಾಡಿದ್ದು, ಮರುದಿನ ಬೆಳಿಗ್ಗೆ ಹರಿಜನ ಕಾಲೋನಿಗೆ ಭೇಟಿ ನೀಡಿ, ದುರ್ಗಾಂಬಿಕಾದೇವಿ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದುಕೊಂಡು ನಂತರ ದಲಿತರ ಮನೆಯಲ್ಲಿ ಉಪಹಾರ ಸೇವನೆ ಮಾಡುವ ಮೂಲಕ ಅವರ ಕುಂದುಕೊರತೆಗಳನ್ನು ಆಲಿಸಿದರು.
ರಾತ್ರಿ ಇಲ್ಲಿಯ ಸರ್ಕಾರಿ ಹಾಸ್ಟೆಲ್‌ನಲ್ಲಿ ವಾಸ್ತವ್ಯ ಮಾಡಿದ್ದ ಅವರು, ಬೆಳಿಗ್ಗೆ ಏಳುತ್ತಿದ್ದಂತೆ ಶಾಸಕ ರೇಣುಕಾಚಾರ್ಯ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓ, ಉಪವಿಭಾಗಾಧಿಕಾರಿ, ತಹಶಿಲ್ದಾರ್ ಮತ್ತಿತರ ಅಧಿಕಾರಿಗಳೊಂದಿಗೆ ವಾಯು ವಿಹಾರ ಮಾಡಿದರು. ನಂತರ ದಲಿತ ಕೇರಿಗೆ ಭೇಟಿ ನೀಡಿದ ಸಚಿವರು, ಶಾಂತರಾಜು ಶಾರದಮ್ಮ ಎಂಬುವವರ ಮನೆಗೆ ಭೇಟಿ ನೀಡಿ ಅವರ ಕುಟುಂಬ ಸದಸ್ಯರ ಜೊತೆ ಕುಳಿತು ರಾಗಿ ತಾಲಿಪಟ್ಟು, ತರಕಾರಿ ಉಪ್ಪಿಟ್ಟು, ಕೆಂಪಿAಡಿ, ಶೇಂಗಾಚಟ್ನಿ, ಮೊಳಕೆಕಾಳು, ಜಾಮೂನು ಸೇವಿಸಿದರು.
ಗ್ರಾಮದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಗ್ರಾಮವಾಸ್ತವ್ಯ ಎಂದರೆ ಬಂದ ಸಿದ್ಧ ಹೋದ ಸಿದ್ಧ ಎಂಬುವುದಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ನಡುವಿನ ಕಂದಕ ದೂರವಾಗಬೇಕು. ಅಧಿಕಾರಿಗಳು ಸರ್ಕಾರಿ ಶಾಲೆಯಲ್ಲಿ ಮಲಗಬೇಕು. ಅಂಗನವಾಡಿಯಲ್ಲಿ ಊಟ ಮಾಡಬೇಕು. ಆಗ ಮಾತ್ರ ಗ್ರಾಮದ ವಾಸ್ತವಿಕ ಸ್ಥಿತಿ ಗೊತ್ತಾಗುತ್ತದೆ. ಅನೇಕ ಜನರು ಮಂತ್ರಿಗಳು, ಜಿಲ್ಲಾಧಿಕಾರಿ ಹಾಗೂ ಎಸಿಯವರ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮುಜುಗೊರಪಡುತ್ತಾರೆ. ಈ ಭಾವನೆ ದೂರವಾಗಬೇಕು ಎಂದು ತಿಳಿಸಿದರು.
ಕರ್ನಾಟಕದ 227 ತಾಲ್ಲೂಕುಗಳಲ್ಲಿ ಈಗಾಗಲೇ ಗ್ರಾಮವಾಸ್ತವ್ಯ ಮಾಡಲಾಗಿದ್ದು, ಅಲ್ಲಿಯ ವಸ್ತುಸ್ಥಿತಿ ಅವಲೋಕಿಸಲಾಗಿದೆ. ಕಂದಾಯ ಇಲಾಖೆಯನ್ನು ಮನೆಮನೆಗೆ ತೆಗೆದುಕೊಂಡು ಹೋಗುವಂತೆ ಬೇರೆ ಬೇರೆ ಇಲಾಖೆಗಳನ್ನು ಮನೆ ಬಾಗಿಲಿಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡುತ್ತೇನೆ ಎಂದ ಅವರು, ದಲಿತ ಕೇರಿಯ ಜನರು ಬಹುತೇಕ ಜಮೀನು, ಸೂರು ಕೊಡುವಂತೆ ಮನವಿ ಮಾಡುತ್ತಿದ್ದು ಆದಷ್ಟು ಬೇಗ ಪೂರೈಸುತ್ತೇನೆ. ಆಶ್ರಯ ವತಿಯಿಂದ ಜಮೀನು ಕೊಡಿಸುವ ವ್ಯವಸ್ಥೆ ಮಾಡುತ್ತೇನೆ ಎಂದರು.
ಇಲ್ಲಿಯ ಗ್ರಾಮಸ್ಥರು ಸ್ಮಶಾನಕ್ಕೆ ಬೇಡಿಕೆ ಇಟ್ಟಿದ್ದು, ಇದಕ್ಕಾಗಿ ಇಡೀ ಊರು ಸುತ್ತಿ ಬಂದಿದ್ದೇವೆ. ಬೆಟ್ಟದ ಮೇಲೆ ಜಾಗ ಇದ್ದು, ಹೆಚ್ಚು ಕಲ್ಲು ಇರುವುದರಿಂದ ಶವಗಳನ್ನು ಸುಡಲು ಆಗುವುದಿಲ್ಲ. ಇಲ್ಲಿಯ ಗ್ರಾಮಸ್ಥರಿಗೆ ಜಮೀನು ಕೇಳಿದರೆ ನೀರಾವರಿ ಜಾಗ ಕೊಡುವುದಿಲ್ಲ ಎಂದು ಹೇಳುತ್ತಿದ್ದಾರೆ. ನಿಮ್ಮ ಊರಿಗೆ ಸ್ಮಶಾನ ಬೇಕೆಂದರೆ ನೀವೆ ಜಾಗ ಕೊಡಬೇಕು. ಈ ಹಿಂದೆ ಇಲ್ಲಿರುವ ಸರ್ಕಾರಿ ಶಾಲೆಗೆ ಯಾರೋ ಜಮೀನನ್ನು ದಾನವಾಗಿ ನೀಡಿದ್ದರಿಂದ ಇಂದು ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆದುಕೊಳ್ಳುತ್ತಿದ್ದಾರೆ. ಸ್ಮಶಾನಕ್ಕೆ ಯಾರು ಜಮೀನು ದಾನ ಕೊಡಬೇಡಿ, ಸರ್ಕಾರದಿಂದ ಹಣ ಒದಗಿಸುತ್ತೇವೆ. ಜಮೀನು ಸಿದ್ಧ ಮಾಡಿಕೊಂಡು ತಿಳಿಸಿದರೆ ಸ್ಮಶಾನಕ್ಕೆ ಬೇಕಾದ ಅನುದಾನ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಈಗಾಗಲೇ ಇಲ್ಲಿಯ ಸರ್ಕಾರಿ ಶಾಲೆಗೆ ಅನುದಾನ ಒದಗಿಸುವುದಾಗಿ ತಿಳಿಸಿದ್ದು, ಹೊಸ ಕಟ್ಟಡ ನಿರ್ಮಿಸಿ. ಹಾಗೂ ತಾಲ್ಲೂಕು ಕಚೇರಿಗೆ ರೂ.2 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ರೇಣುಕಾಚಾರ್ಯ ಅವರು ಗ್ರಾಮಗಳ ಅಭಿವೃದ್ಧಿಗಾಗಿ ರೂ.20 ಕೋಟಿ ಅನುದಾನ ತಂದಿದ್ದು. ಗ್ರಾಮದ ಬೆಳವಣಿಗೆಗೆ ಪೂರಕವಾಗುವ ಕೆಲಸ ಮಾಡಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಜೀವ ಉಳಿಸಿಕೊಳ್ಳಲು ಜನರು ಮನೆ ಸೇರಿಕೊಳ್ಳುತ್ತಿದ್ದರೆ, ಪೌರಕಾರ್ಮಿಕರು ತಮ್ಮ ಜೀವದ ಅಂಗನ್ನು ತೊರೆದು ರಸ್ತೆ, ಶಾಲೆ, ಆಸ್ಪತ್ರೆ, ಊರು-ಕೇರಿಯನ್ನು ಶುದ್ಧಿಕರಿಸುವಂತಹ ಪವಿತ್ರ ಕೆಲಸ ಮಾಡಿದ್ದಾರೆ. ಇಂತಹ ಜನರಿಗೆ ನಾವು ಮೊದಲ ಆದ್ಯತೆ ಕೊಡಬೇಕು. ಇಂದು ಇವರಿಂದಲೇ ನಾವು ಎಂಬ ಸಂದೇಶ ಸಾರಬೇಕು.
ರೇಣುಕಾಚಾರ್ಯ ಮಾತನಾಡಿ, ಕೋವಿಡ್ ಬಿಕ್ಕಟ್ಟಿನಿಂದ ಸ್ಥಗಿತಗೊಂಡಿದ್ದ ಗ್ರಾಮಾವಾಸ್ತವ್ಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಪುನಾರಂಭಗೊAಡಿದೆ. ಈ ಸಂದರ್ಭದಲ್ಲಿ ಸಾವಿರಾರು ಅರ್ಜಿಗಳು ವಿಲೇವಾರಿಯಾಗಿದೆ. ಜಿಲ್ಲಾಡಳಿತ, ತಾಲ್ಲೂಕಾಡಳಿತ ಹಾಗೂ ಎಲ್ಲಾ ಇಲಾಖ ಅಧಿಕಾರಿಗಳು ಹಗಲು ರಾತ್ರಿ ಶ್ರಮಿಸಿ ಗ್ರಾಮವಾಸ್ತವ್ಯವನ್ನು ರಾಜ್ಯಕ್ಕೆ ಮಾದರಿ ಮತ್ತು ದಿಕ್ಸೂಚಿ ಕಾರ್ಯಕ್ರಮವನ್ನಾಗಿ ಮಾಡಿಕೊಟ್ಟಿದ್ದಾರೆ. ಇಲ್ಲಿಯ ಗ್ರಾಮಸ್ಥರ ಒಗ್ಗೂಡುವಿಕೆಯಿಂದ ಕಾರ್ಯಕ್ರಮ ಯಶಸ್ವಿಯಾಗಿದೆ. ಇನ್ನೂ ಕುಂದೂರು ಗ್ರಾಮದ ಶಾಲೆಗೆ ಹೊಸ ಕಟ್ಟಡ, ನ್ಯಾಮತಿ ತಾಲ್ಲೂಕಿಗೆ ಮಿನಿ ವಿಧಾನಸೌಧ ನಿರ್ಮಾಣವಾಗಲಿದೆ. ಹಾಗೂ ಅನಾಥ ಮಕ್ಕಳಿಗೆ ವಿದ್ಯಾಭ್ಯಾಸ ಪೂರೈಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯತ್ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ತಹಶೀಲ್ದಾರ್ ಬಸವನಗೌಡ ಕೋಟೂರ, ತಾ.ಪಂ ಉಪಕಾರ್ಯಾನಿರ್ವಹಣಾಧಿಕಾರಿ ರಾಮಭೋವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ವಿಜಯಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಗಂಗಣ್ಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕುಂದೂರು ಗ್ರಾಮಸ್ಥರು ತೋರಿದ ಪ್ರೀತಿಗೆ ಚಿರಋಣಿ: ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ ನನ್ನನ್ನು ಚಕ್ಕಡಿ ಮೂಲಕ ಭವ್ಯ ಮೆರವಣಿಗೆಯೊಂದಿಗೆ ಬರ ಮಾಡಿಕೊಂಡಿದ್ದು, ಊರಲ್ಲಿ ಹಬ್ಬದ ವಾತಾವರಣ, ಜನಪದ ಶೈಲಿಯಲ್ಲೇ ನೃತ್ಯ, ಭಜನೆ ಸೇರಿದಂತೆ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ಏರ್ಪಡಿಸಿದ್ದು ಮನಕ್ಕೆ ಸಂತೃಪ್ತಿಯಾಗಿದೆ. ಗ್ರಾಮಸ್ಥರು ತೋರಿಸಿದ ಪ್ರೀತಿಗೆ ಚಿರಋಣಿಯಾಗಿದ್ದೇನೆ. ಗ್ರಾಮವಾಸ್ತವ್ಯ ಯಶಸ್ವಿಯಾಗಿದೆ ಎಂದರು.

  • ಕಂದಾಯ ಸಚಿವ ಆರ್.ಅಶೋಕ್

LEAVE A REPLY

Please enter your comment!
Please enter your name here