ಜಿ.ಪಂ.ಆವರಣದಲ್ಲಿ ನಿಸರ್ಗಸ್ನೇಹಿ ದೀಪಗಳ ಮಳಿಗೆ ಉದ್ಘಾಟನೆ.

0
105

ಶಿವಮೊಗ್ಗ, ಅಕ್ಟೋಬರ್ 26:ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿವಿಧ ಸ್ವ ಸಹಾಯ ಸಂಘದ ಮಹಿಳೆಯರು ತಯಾರಿಸಿದ ನಿಸರ್ಗಸ್ನೇಹಿ ಮಣ್ಣಿನ ದೀಪಗಳನ್ನು ಮಾರಾಟ ಮಾಡಲು ಜಿಲ್ಲಾ ಪಂಚಾಯತ್ ಆವರಣದಲ್ಲಿ ಅವಕಾಶ ನೀಡಲಾಗಿದ್ದು, ಇಂದು ಈ ಮಾರಾಟ ಮಳಿಗೆಯನ್ನು ಜಿ.ಪಂ.ಸಿಇಓ ಎಂ.ಎಲ್.ವೈಶಾಲಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ ಸೃಜನಶೀಲತೆ ಮತ್ತು ಪರಿಶ್ರಮದಿಂದ ಮಹಿಳೆಯರು ತಯಾರಿಸಿದ ಮಣ್ಣಿನ ದೀಪಗಳನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಖರೀದಿಸುವ ಮೂಲಕ ಸ್ವಸಹಾಯ ಮಹಿಳಾ ಗುಂಪುಗಳನ್ನು ಪ್ರೋತ್ಸಾಹಿಸಬೇಕೆಂದು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಆವರಣದಲ್ಲಿ ಈ ದೀಪಗಳ ಮಳಿಗೆಗಳು ನವೆಂಬರ್ 03 ರವರೆಗೆ ಇರಲಿವೆ. ಕಾರ್ಯಕ್ರಮದಲ್ಲಿ ಜಿ.ಪಂ. ಯೋಜನಾ ನಿರ್ದೇಶಕರು, ಸಹಾಯಕ ಯೋಜನಾ ಅಧಿಕಾರಿಗಳು, ಜಿ.ಪಂ ಸಿಬ್ಬಂದಿಗಳು ಹಾಗೂ ಸ್ವ ಸಹಾಯ ಗುಂಪಿನ ಸದಸ್ಯರು ಇದ್ದರು.

LEAVE A REPLY

Please enter your comment!
Please enter your name here