ರಾಷ್ಟ್ರೀಯ ಏಕತಾ ದಿವಸ ಆಚರಣೆ

0
83

ದಾವಣಗೆರೆ. ನ.01;ಜಿಲ್ಲಾಡಳಿತ ವತಿಯಿಂದ ರಾಷ್ಟ್ರೀಯ ಏಕತಾ ದಿವಸ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರು ಏಕತಾ ಪ್ರಮಾಣ ವಚನ ಭೋದಿಸಿದರು.
ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ನನ್ನನ್ನು ಅರ್ಪಿಸಿಕೊಳ್ಳುತ್ತೇನೆ ಮತ್ತು ನನ್ನ ದೇಶ ಬಾಂಧವರಲ್ಲಿ ಈ ಸಂದೇಶವನ್ನು ಸಾರಲು ಶ್ರಮಿಸುತ್ತೇನೆ ಎಂದು ನಾನು ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ. ಸರ್ದಾರ್ ವಲ್ಲಬಾಯ್ ಪಟೇಲ್‍ರವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಪೂರ್ತಿಯನ್ನು ಕಾಪಾಡುತ್ತೇನೆ ಎಂದು ಪ್ರಮಾಣ ಮಾಡುತ್ತೇನೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ನಾನು ನನ್ನದೇ ಆದ ಕೊಡುಗೆಯನ್ನು ನೀಡುತ್ತೇನೆ ಎಂದು ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕೌಸರ್ ರೇಷ್ಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here