ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಹಾನಿಯಾದ ವಿವಿಧ ಪ್ರದೇಶಗಳಿಗೆ ಇಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕನಕಪುರ ತಾಲ್ಲೂಕಿನ ಕಸಬಾ ಹೋಬಳಿಯ ಚಿಕ್ಕೇನಹಳ್ಳಿ ಗ್ರಾಮದಲ್ಲಿ ಮಳೆಯಿಂದ ಉಂಟಾದ ಮನೆ ಹಾನಿ, ಅಣಜವಾಡಿ ಗ್ರಾಮದಲ್ಲಿ ಬೆಳೆ ಹಾನಿ, ಚಿಕ್ಕಮುದವಾಡಿ ಗ್ರಾಮದಲ್ಲಿ ಉರ್ದು ಶಾಲೆಯಲ್ಲಿ ಉಂಟಾಗಿರುವ ಮೂಲಭೂತ ವ್ಯವಸ್ಥೆಗಳ ತೊಂದರೆ, ಕೋಡಿಹಳ್ಳಿ ಹಾಗೂ ಹೊಸದೊಡ್ಡಿಯಲ್ಲಿ ಮನೆ ಹಾನಿ, ಕೋಡಿಪುರದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಂಟಾಗಿರುವ ತೊಂದರೆಗಳ ಬಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ವಿಶ್ವನಾಥ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.