ಜಿಲ್ಲಾಧಿಕಾರಿಗಳಿಂದ ಮಳೆ ಹಾನಿ‌ ಪ್ರದೇಶಗಳ ಪರಿಶೀಲನೆ

0
161

ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಹಾನಿಯಾದ ವಿವಿಧ ಪ್ರದೇಶಗಳಿಗೆ ಇಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾಗಡಿ ತಾಲ್ಲೂಕಿನ ಮಾಡಬಾಳ ಹೋಬಳಿಯ ವಿ.ಜಿ.ದೊಡ್ಡಿ, ಕುದೂರು ಹೋಬಳಿಯ ಮರೂರು, ಕೆ.ಜಿ.ಕೃಷ್ಣಪುರ, ಕುದೂರು ಗ್ರಾಮಗಳಿಗೆ ಭೇಟಿ ನೀಡಿ ಭಾರೀ ಮಳೆಯಿಂದ ಉಂಟಾಗಿರುವ ಮನೆ ಹಾನಿ ಹಾಗೂ ತೊಂದರೆಗಳ ಬಗ್ಗೆ ಪರಿಶೀಲಿಸಿ ಗ್ರಾಮಸ್ಥರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದೇ ಸಂದರ್ಭದಲ್ಲಿ‌ ಕುದೂರು ಸರ್ಕಾರಿ ಮಾದರಿ‌ ಪ್ರಾಥಮಿಕ‌ ಪಾಠಶಾಲೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ‌ ನಡೆಸಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶ್ರೀನಿವಾಸ್ ಪ್ರಸಾದ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here