ಕಂಪ್ಲಿ ತಾಲೂಕಿನ ಕಮಲಾಪುರದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸಂಸ್ಕೃತಿ,ಸಂಸ್ಕಾರ ಮತ್ತು ಬಾಲ್ಯವಿವಾಹ ನಿಷೇಧ ಜಾಗೃತಿ ವಿಚಾರ ಗೋಷ್ಠಿ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮವನ್ನು ಶ್ರೀ ಪಿ.ವಿನಾಯಕ ಸ್ವಾಮಿ,ವಕೀಲರು ಕಮಲಾಪುರ ಉದ್ಘಾಟಿಸಿದರು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಪುರುಷೋತ್ತಮ.ಪಿ.ಕೆ. ಪ್ರಾದೇಶಿಕ ನಿರ್ದೇಶಕರು, ಶ್ರೀ.ಕ್ಷೇ.ಧ.ಗ್ರಾ.ಯೋ.ಬಿಸಿ.ಟ್ರಸ್ಟ್ (ರಿ) ಕೊಪ್ಪಳ ಇವರು ಆಗಮಿಸಿ ಮಾಹಿತಿ ಮಾರ್ಗದರ್ಶನ ನೀಡಿದರು.
ಹಾಗೂ ಈ ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಶ್ರೀ ಚಿದಾನಂದ ರವರು ಉಪಸ್ಥಿತರಿದ್ದು ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ಡಾ|| ಈರಮ್ಮ .ಆರ್. ಭಾರತೀಯ ಮಾನವ ಹಕ್ಕುಗಳ ಹಿತರಕ್ಷಣಾ ಸಮಿತಿ ಕಲ್ಯಾಣ ಕರ್ನಾಟಕ ಮಹಿಳಾ ಒಕ್ಕೂಟ ಮತ್ತು ಶ್ರೀಮತಿ ವಿಜಯಲಕ್ಷ್ಮೀ ಸರ್ಕಲ್ ಇನ್ಸ್ ಪೆಕ್ಟರ್,ಕಮಲಾಪುರ ಇವರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.