ಬಳ್ಳಾರಿ,ಡಿ.17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸ್ಮೈಲ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ನೆಹರು ಕಾಲೋನಿಯಲ್ಲಿರುವ ಹಿರಿಯನಾಗರಿಕ ಹಗಲು ಯೋಗಕ್ಷೇಮ ಕೇಂದ್ರದಲ್ಲಿ ಅಸಾಂಕ್ರಾಮಿಕ ರೋಗಗಳ ಜನ ಜಾಗೃತಿ ಕಾರ್ಯಕ್ರಮ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಡಿ.14ರಂದು ನಡೆಯಿತು.
ಶಿಬಿರದಲ್ಲಿ ಭಾಗವಹಿಸಿದ ನೂರಾರು ಸಂಖ್ಯೆಯ ಹಿರಿಯನಾಗರಿಕರಿಗೆ ಉಚಿತವಾಗಿ ಬಿ.ಪಿ, ಸುಗರ್ ಹಾಗೂ ಈಸಿಜಿ ತಪಾಸಣೆಯನ್ನು ಮಾಡಲಾಯಿತು. ನಂತರ ಅವರಿಗೆ ಉಚಿತವಾಗಿ ಔಷಧಿಗಳನ್ನು ಸಹ ನೀಡಲಾಯಿತು.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಆಸ್ಪತ್ರೆ ಸಿಬ್ಬಂದಿಯವರು ಸಹಕಾರ ನೀಡಿದ್ದಾರೆ ಎಂದು ಸ್ಮೈಲ್ ಸಂಸ್ಥೆಯ ಕಾರ್ಯದರ್ಶಿ ಕೆ.ಎಂ.ಉಮಾಪತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.